ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ: ರಕ್ತವಾಂತಿ ಮಾಡಿಕೊಂಡು ಸಾವನಪ್ಪಿದ 5 ಬೀದಿನಾಯಿಗಳು!

ಜೂನ್ 27, 2025 - 16:28
 0  17
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ: ರಕ್ತವಾಂತಿ ಮಾಡಿಕೊಂಡು ಸಾವನಪ್ಪಿದ 5 ಬೀದಿನಾಯಿಗಳು!

ಬೆಂಗಳೂರು: ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ಭಟ್ಟರಹಳ್ಳಿಯ ಬೀದಿಯೊಂದರಲ್ಲಿ ರಾತ್ರಿಯ ವೇಳೆ ಆರು ಬೀದಿನಾಯಿಗಳು ರಕ್ತವಾಂತಿ ಮಾಡಿಕೊಂಡು ಒದ್ದಾಡುತ್ತಿರುವ ದೃಶ್ಯ ಕಂಡು ಬಂದಿದೆ. ಹೌದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಕೊಪ್ಪ ವಲಯ ಒಂದರಲ್ಲೇ 5 ಹುಲಿಗಳ ಕಳೆಬರ ಪತ್ತೆಯಾಗಿದ್ದವು.

ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಗುರುವಾರ ಆರು ಬೀದಿನಾಯಿಗಳು ರಕ್ತವಾಂತಿ ಮಾಡಿಕೊಂಡಿದ್ದವು. ಆರು ನಾಯಿಗಳ ಪೈಕಿ ಐದು ನಾಯಿಗಳು ಮೃತಪಟ್ಟಿವೆ. ಐದು ಬೀದಿ ನಾಯಿಗಳು ಒದ್ದಾಡಿ ಪ್ರಾಣಬಿಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

  ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಬೀದಿ ನಾಯಿಗಳ ಸಾವಿಗೆ ಕಾರಣ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನಾಯಿಗಳ ರಕ್ತದ ಮಾದರಿ ರವಾನೆ ಮಾಡಲಾಗಿದೆ. ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆಯನ್ನು ಪೊಲೀಸರು ವ್ಯಕ್ತವಾಗಿದೆ.   

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow