ರಾಜ್ಯದಲ್ಲೊಂದು ಅಮಾನವೀಯ ಘಟನೆ: ಪ್ರಾಣಿಯಂತೆ ಕಾರ್ಮಿಕನ ಮೃತದೇಹ ಎಳೆದೊಯ್ದ ಸಿಬ್ಬಂದಿ.!

ಫೆಬ್ರವರಿ 19, 2025 - 10:08
 0  18
ರಾಜ್ಯದಲ್ಲೊಂದು ಅಮಾನವೀಯ ಘಟನೆ: ಪ್ರಾಣಿಯಂತೆ ಕಾರ್ಮಿಕನ ಮೃತದೇಹ ಎಳೆದೊಯ್ದ ಸಿಬ್ಬಂದಿ.!

ಕಲಬುರಗಿ: ರಾಜ್ಯದಲ್ಲೊಂದು ಅಮಾನವೀಯ ಘಟನೆ ನಡೆದಿದ್ದುಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇವನ್ನು ಶ್ರೀ ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ತರಹ ಎಳೆದೊಯ್ದ ವಿಡಿಯೋ ವೈರಲ್​ ಆಗಿದೆ.

ಬಿಹಾರ ಮೂಲದ ಚಂದನಸಿಂಗ್ (35) ಮೃತ ದುದೈವಿ. ಚಂದನಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಕರ್ತವ್ಯನಿರತ ವೇಳೆ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕ ಚಂದನಸಿಂಗ್ತದೇಹವನ್ನು ಸಿಬ್ಬಂದಿ ದರದರನೇ ಎಳೆದುಕೊಂಡು ಹೋಗಿದ್ದಾರೆ. ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow