ರಾಜ್ಯಾದ್ಯಂತ ಇಂದಿನಿಂದ BPL ಕಾರ್ಡ್ ಪರಿಶೀಲನೆ! ಅನರ್ಹರ ಕಾರ್ಡ್ʼಗಳಿಗೆ ಬೀಳುತ್ತಾ ಕತ್ತರಿ!?

ರಾಜ್ಯದಲ್ಲಿ ಶುರುವಾಗಿರುವ ಬಿಪಿಎಲ್ ಅಥವಾ ಅನರ್ಹ ಪಡಿತರ ಬಗ್ಗೆ ರಾಜ್ಯದಲ್ಲಿ ಸದ್ಯ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅನರ್ಹ ಪಡಿತರ ಚೀಟಿಗಳನ್ನು ರದ್ದು ಮಾಡೋಕೆ ರಾಜ್ಯ ಸರ್ಕಾರ ಮುಂದಾಗಿದ್ದು ಸಂಚಲನ ಸೃಷ್ಟಿಸಿದೆ. ಮಾತ್ರವಲ್ಲದೇ ಬಿಪಿಎಲ್ ಕಾರ್ಡ್ ರದ್ದಿನ ಬಗ್ಗೆ ಜನರಲ್ಲಿ ಭಾರೀ ಕಳವಳ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಇಂದಿನಿಂದ ಆಹಾರ ಇಲಾಖೆ ಪಡಿತರ ಚೀಟಿಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಆರಂಭಿಸುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್ ಪ್ಯಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿರುವವರು ಕಾರ್ಡ್ಗಳನ್ನ ಸರಿ ಪಡಿಸಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಎಲ್ಲಿಲ್ಲಿ ಕಾರ್ಡ್ ತಿದ್ದುಪಡಿ?
ಪೂರ್ವ ವಲಯ- ರಾಜಾಜಿನಗರ ಐಆರ್ಐ
ಪಶ್ಚಿಮ ವಲಯ- ಬಸವನಗುಡಿ
ಉತ್ತರ ವಲಯ- ಮೆಜೆಸ್ಟಿಕ್ ಆಹಾರ ಇಲಾಖೆ ಕಚೇರಿ
ಕೆಂಗೇರಿ & ಬನಶಂಕರಿ-ಆಹಾರ ಇಲಾಖೆ ಕಚೇರಿ
ಆರ್ಟಿನಗರ-ಆಹಾರ ಇಲಾಖೆ ಕಚೇರಿ
ವಯ್ಯಾಲಿಕಾವಲ್-ಆಹಾರ ಇಲಾಖೆ ಕಚೇರಿ
ಯಲಹಂಕ- ಆಹಾರ ಇಲಾಖೆ ಕಚೇರಿ
ಬಿಪಿಎಲ್ ಕಾರ್ಡ್ ತಿದ್ದುಪಡಿ ಹೇಗೆ?
ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು. ಸರ್ಕಾರಿ ನೌಕರರ, ತೆರಿಗೆ ಪಾವತಿದಾರರ ಅನ್ನೋದನ್ನು ಪರಿಶೀಲಿಸಬೇಕು. ಕಾರ್ಡ್ ಹೊಂದಿರುವವರು ಬಡವರು ಇದ್ದಾರಾ? ಶ್ರೀಮಂತರು ಇದ್ದಾರಾ? ಅಂತ ಮನೆ ಪರಿಶೀಲಿಸಬೇಕು. ಆರ್ಡಿ ನಂಬರ್ ಪರಿಶೀಲನೆ ಮಾಡಬೇಕು. ಸ್ಥಳ ಪರಿಶೀಲನೆ ಜೊತೆಗೆ ದಾಖಲೆ ಪರಿಶೀಲನೆ ಮಾಡಬೇಕು. ಹೀಗೆ ಆಹಾರ ನಿರೀಕ್ಷಕರು ಒನ್ ಬೈ ಒನ್ ಆಗಿ ಕಾರ್ಡ್ಗಳನ್ನು ಪರಿವರ್ತನೆ ಮಾಡಬೇಕಿದೆ. ಏಕಾಏಕಿ ಮೂಲ ಸ್ಥಾನಕ್ಕೆ ಶಿಫ್ಟ್ ಮಾಡಲು ಆಗಲ್ಲ. ಎನ್ಐಸಿ ಸಾಫ್ಟ್ವೇರ್ ಮೂಲಕ ಕಾರ್ಡ್ ಕನ್ವರ್ಟ್ ಮಾಡಬೇಕು. ಕಾರ್ಡ್ ಬದಲಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?






