ರಾಮಮಂದಿರ ಕಟ್ಟುವುದರಿಂದ ಯಾವುದೇ ವ್ಯಕ್ತಿಯು ಹಿಂದೂ ನಾಯಕನಾಗುವುದಿಲ್ಲ: ಮೋಹನ್ ಭಾಗವತ್

ಡಿಸೆಂಬರ್ 21, 2024 - 22:07
 0  14
ರಾಮಮಂದಿರ ಕಟ್ಟುವುದರಿಂದ ಯಾವುದೇ ವ್ಯಕ್ತಿಯು ಹಿಂದೂ ನಾಯಕನಾಗುವುದಿಲ್ಲ: ಮೋಹನ್ ಭಾಗವತ್

ನವದೆಹಲಿ: ರಾಮ ಮಂದಿರ ನಿರ್ಮಾಣ ಮಾಡುವುದರಿಂದ ಯಾವುದೇ ವ್ಯಕ್ತಿಯು ಹಿಂದೂ ನಾಯಕನಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದೆ. ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹಿಂದೂಗಳು ನಂಬಿದರು. ಆದರೆ ಈಗ ನಿರ್ಮಾಣ ಮಾಡುವುದರಿಂದ ಯಾವುದೇ ವ್ಯಕ್ತಿಯು ಹಿಂದೂ ನಾಯಕನಾಗುವುದಿಲ್ಲ' ಎಂದರು.

ಇದಲ್ಲದೆ, 'ರಾಮಮಂದಿರ ನಿರ್ಮಾಣದ ಬಳಿಕ, ಇಂತಹ ಇನ್ನಷ್ಟು ಸಮಸ್ಯೆಗಳನ್ನು ಹೊರತಂದು ತಾವು ಹಿಂದೂ ನಾಯಕರಾಗಬಹುದು ಎಂದು ಹಲವರು ಭಾವಿಸಿದ್ದಾರೆ. ಇದಕ್ಕಾಗಿ ಪ್ರತಿ ದಿನ ಒಂದೊಂದು ಸಮಸ್ಯೆಯನ್ನು ಹುಡುಕಿ ತೆಗೆಯುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ' ಎಂದೂ ಹೇಳಿದರು. 

ತಮ್ಮ ತಪ್ಪುಗಳಿಂದ ಭಾರತೀಯರು ಪಾಠ ಕಲಿಯಬೇಕು, ವಿವಾದಾತ್ಮಕ ವಿಷಯಗಳನ್ನು ತಪ್ಪಿಸುವ ಮೂಲಕ ಒಳ್ಳೆಯತನಕ್ಕೆ ಮಾದರಿಯಾಗಬೇಕು. ಉಗ್ರವಾದ, ಆಕ್ರಮಣಶೀಲತೆ, ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಒತ್ತಿ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow