ರಿಕ್ಕಿ ರೈ ಪ್ರಕರಣಕ್ಕೆ ಟ್ವಿಸ್ಟ್: ನಾಲ್ವರ ವಿರುದ್ಧ FIR ದಾಖಲು..! ಮುತ್ತಪ್ಪ ರೈ ಸಂಬಂಧಿ ಹೇಳಿದ್ದೇನು..?

ರಾಮನಗರ: ಗನ್ ಮ್ಯಾನ್ ಇಟ್ಕೊಂಡು ಓಡಾಡುವ ರಿಕ್ಕಿ ರೈಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನೂ ಇನ್ನೂ ಘಟನೆ ಕುರಿತು ಬಿಡದಿಯಲ್ಲಿ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಮಾತನಾಡಿ, ರಾತ್ರಿ ನನಗೆ ವಿಚಾರ ಗೊತ್ತಾಯ್ತು, ಸೆಕ್ಯುರಿಟಿ ನನಗೆ ಫೋನ್ ಮಾಡಿದ್ರು. ಮುತ್ತಪ್ಪ ರೈ ಕಾಲದಿಂದಲೂ ಅವರ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ.
ಆಸ್ತಿ ವಿಚಾರಕ್ಕೆ ಸಂಭಂಧಿಸಿದ ಒಂದಷ್ಟು ಇಶ್ಯೂ ಇತ್ತು. ರಿಕ್ಕಿ ಹೆಚ್ಚಿನ ಸಮಯ ಬಿಡದಿಯಲ್ಲಿ ಕಳೆಯುತ್ತಿದ್ರು. ಬೆಂಗಳೂರಿನ ಸದಾಶಿವ ನಗರದಲ್ಲೂ ಮನೆ ಇದೆ. ಬಿಡದಿ ಮನೆಯಲ್ಲಿ ಇಂಟೀರಿಯರ್ ಕೆಲಸ ನಡೆಯುತ್ತಿತ್ತು. ಅದನ್ನೂ ನೋಡೊಕೆ ರಿಕ್ಕಿ ಬಂದಿದ್ರು. ರಾತ್ರಿ ಇಲ್ಲಿಂದ ಹೋಗುವಾಗ ಯಾರೋ ಅಟ್ಯಾಕ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಮುಂದುವರೆದಿರುವ ಸಾಧ್ಯತೆ ಇದೆ. ಯಾರೋ ಟಾರ್ಗೆಟ್ ಮಾಡಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ರಿಕ್ಕಿ ರೈಗೆ ಮುತ್ತಪ್ಪ ರೈ ಅವರು ಇದ್ದಾಗಲೇ ಮೊದಲ ಪತ್ನಿಯಿಂದ ಡೈವರ್ಸ್ ಆಗಿತ್ತು. 2ನೇ ಪತ್ನಿ ವಿದೇಶದವರು, ಅವರು ಮಗು ಜೊತೆ ವಿದೇಶದಲ್ಲೇ ಇದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ರು ಅಂತ ಪ್ರಕಾಶ್ ರೈ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






