ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ʼಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ

ಅಕ್ಟೋಬರ್ 14, 2024 - 17:52
 0  13
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ʼಗೆ ಜೈಲೇ ಗತಿ – ಜಾಮೀನು ಅರ್ಜಿ ವಜಾ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ನಲ್ಲಿ ನಡೆಯಿತು. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಗೆ ನಿರಾಶೆಯಾಗಿದ್ದು ಇವರ ಜಾಮೀನು ಅರ್ಜಿ ವಜಾಗೊಂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿದರು. ಇಂದು SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ. ಇನ್ನುಳಿದಂತೆ ನಟ ದರ್ಶನ್, ಪವಿತ್ರಾಗೌಡ, ಎ11 ನಾಗರಾಜು, ಎ12 ಜಾಮೀನು ಅರ್ಜಿ ವಜಾಗೊಂಡಿದೆ.

ದರ್ಶನ್ ಪರ ಸಿವಿ ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು. ದರ್ಶನ್ ವಿರುದ್ಧ ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂದು ವಾದ ಮಂಡಿಸಿದ್ದರು. ಇದಕ್ಕೆ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಕೌಂಟರ್ ಕೊಟ್ಟಿದ್ದರು. ಪ್ರಸನ್ನ ಕುಮಾರ್ ಅವರ ವಾದ ಜಡ್ಜ್​ಗೆ ಹೆಚ್ಚು ಸಮಂಜಸ ಎನಿಸಿದೆ. ಹಾಗಾಗಿ ದರ್ಶನ್​ಗೆ ಜಾಮೀನು ನಿರಾಕರಿಸಲಾಗಿದೆ. ಇದರಿಂದ ದರ್ಶನ್​ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow