ರೇಣುಕಾಸ್ವಾಮಿ ಕೊಲೆ ಕೇಸ್:‌ ಇಂದು ನಟ ದರ್ಶನ್ & ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಡಿಸೆಂಬರ್ 9, 2024 - 11:04
 0  7
ರೇಣುಕಾಸ್ವಾಮಿ ಕೊಲೆ ಕೇಸ್:‌ ಇಂದು ನಟ ದರ್ಶನ್ & ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಜೈಲು ಸೇರಿದ್ರು. ಮಧ್ಯಂತರ ಜೈಲು ಪಡೆದು  ನಟ ದರ್ಶನ್ ಹೊರಗೆ ಬಂದಿದ್ದಾರೆ. ಕಳೆದ ಶುಕ್ರವಾರ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠ, ಸರ್ಕಾರ ಪರ ವಕೀಲರಾದ ಪ್ರಸನ್ನಕುಮಾರ ವಾದ ಆಲಿಸಿ ಇಂದಿಗೆ ಮುಂದೂಡಿತ್ತು. ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿತ್ತು. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಮಾಡಿದ್ದ ವಾದಕ್ಕೆ ಪ್ರಸನ್ನ ಕುಮಾರ್ ಪ್ರತಿವಾದಿಸಿದ್ರು. ಇಂದು ಮಧ್ಯಾಹ್ನ 2.30ಕ್ಕೆ ಬೇಲ್​ ಅರ್ಜಿ ವಿಚಾರಣೆ ನಡೆಸಲಿದೆ. ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಕೂಡ ಡಿಸೆಂಬರ್ 11ಕ್ಕೆ ಮುಕ್ತಾಯ ಆಗಲಿದ್ದು ಜಾಮೀನು ಸಿಗುತ್ತಾ ಅಂತಾ ಕಾದು ನೋಡಬೇಕಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow