ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೇ.14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಎಪ್ರಿಲ್ 22, 2025 - 15:59
 0  12
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೇ.14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಬಂದಿದ್ದಾರೆ. ಪ್ರತಿ ತಿಂಗಳೂ ಸಹ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ನಟ ದರ್ಶನ್‌ ಅವರಿಗೆ ಸುಪ್ರೀಂಕೋರ್ಟ್‌ ವಿಚಾರಣೆ ಮಹತ್ವದಾಗಿತ್ತು. ಒಂದು ವೇಳೆ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದ್ದರೆ ಕೂಡಲೇ ನಟ ಜೈಲು ಸೇರಬೇಕಾಗಿತ್ತು. ಆದರೆ, ವಿಚಾರಣೆ ಮುಂದೂಡಿರುವುದರಿಂದ ಮೇ 14 ರವೆಗೆ ಅಂದರೆ 21 ದಿನ ರಿಲೀಫ್‌ ಸಿಕ್ಕಿದೆ.

ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ 13 ರಂದು ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಜಾಮೀನು ನೀಡಿತ್ತು. ಆ ಬಳಿಕ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರಾಗಿತ್ತು.

 ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಏಪ್ರಿಲ್‌ 2 ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಏಪ್ರಿಲ್‌ 22 ಕ್ಕೆ ಮುಂದೂಡಿತ್ತು. ಸದ್ಯ ಮಂಗಳವಾರ ವಿಚಾರಣೆ ನಡೆಸಿ ಹಲವು ಪ್ರಶ್ನೆಗಳನ್ನು ಕೇಳಿದ್ದು, ಇನ್ನಷ್ಟು ವಿಚಾರಣೆ ಅಗತ್ಯವಿದೆ ಎಂದು ಮೇ 14 ಕ್ಕೆ ಮುಂದೂಡಿತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow