ರೇಣುಕಾಸ್ವಾಮಿ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಮತ್ತು ಗ್ಯಾಂಗ್..! ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಿದ್ದಾರೆ. ಎ1 ಆರೋಪಿ ಆಗಿರುವ ಪವಿತ್ರಾ ಗೌಡ, ದರ್ಶನ್ ಅವರು ಈಗಾಗಲೇ ಕೋರ್ಟ್ಗೆ ಕಾರಿನಲ್ಲಿ ಬಂದು ನ್ಯಾಯಾಲಯದ ಒಳಗಡೆ ಹೋಗಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ಹೀಗಾಗಿ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್ಗೆ ಹಾಜರಾಗಿದ್ದಾರೆ.
ಸಿಸಿಎಚ್ 57ನೇ ಕೋರ್ಟ್ಗೆ ದರ್ಶನ್, ಪವಿತ್ರಾಗೌಡ, ಪುಟ್ಟಸ್ವಾಮಿ, ವಿನಯ್, ನಾಗರಾಜ್ ಪ್ರದೂಷ್, ದೀಪಕ್ ರಾಘವೇಂದ್ರ, ಕಾರ್ತಿಕ್, ಕೇಶವಮೂರ್ತಿ ಅನುಕುಮಾರ್ ಹಾಜಾರಾಗಿದ್ದು, 16,17 ನೇ ಆರೋಪಿಗಳಾದ ನಿಖಿಲ್, ಕೇಶವಮೂರ್ತಿ ಗೈರಾಗಿದ್ದರು.
ದರ್ಶನ್ ಅವರು ನ್ಯಾಯಾಲಯಕ್ಕೆ ಹಾಜರಾಗುವ ಮೊದಲೇ ಆರ್.ಆರ್ ನಗರದ ತಮ್ಮ ನಿವಾಸದ ಬಳಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಇದಾದ ಮೇಲೆ ಕೋರ್ಟ್ನತ್ತ ದರ್ಶನ್ ತೆರಳಿದರು. ಕೋರ್ಟ್ಗೆ ಹೋಗುವಾಗ ದರ್ಶನ್ ಅವರು ಕುಂಟುತ್ತಾ ನಡೆದುಕೊಂಡು ಹೋಗಿರುವುದು ಕಂಡುಬಂತು. 57ನೇ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಜೈ ಶಂಕರ್ ಪೀಠದಲ್ಲಿ ಪ್ರಕರಣದ ಎಲ್ಲ ಆರೋಪಿಗಳ ವಿಚಾರಣೆ ನಡೆದಿದ್ದು,
ಸಿಸಿಎಚ್ 57 ನೇ ಕೋರ್ಟ್ ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಇನ್ನು ಪೊಲೀಸರ ವಿರುದ್ದ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ವಾದ ಮಾಡಿ ಆರೋಪ ಮಾಡಿದ್ದು ಹೀಗೆ. ಇತರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗುವಂತೆ ಒತ್ತಾಯ ಮಾಡುತ್ತಿದ್ದಾರೆ. ಮಾಫಿ ಸಾಕ್ಷಿ ಆಗುವಂತೆ ಪೊಲೀಸರ ಒತ್ತಡ ಎಂದು ಆರೋಪಿಸಿದರು. ತಮ್ಮ ಬಳಿ ಸಾಕ್ಷಿ ಇದೆ ಎಂದು ಹೈಕೋರ್ಟ್ ನಲ್ಲಿ ವಾದಿಸಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






