ರೇಣುಕಾಸ್ವಾಮಿ ಪ್ರಕರಣ: ಸುಪ್ರೀಂ ಕೋರ್ಟ್ʼನಲ್ಲಿ ಇಂದು ದರ್ಶನ್ ಬೇಲ್ ಭವಿಷ್ಯ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದೀಗ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿರುವುದು.
ಹೌದು ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗುವಂತಿದೆ.
ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.
ಮಾ.18ಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್ನಲ್ಲಿ ಗೆಲುವು ಪಡೆದಂತೆ ಸುಪ್ರೀಂಕೋರ್ಟ್ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಹಾಗೂ ಹೈಕೋರ್ಟ್ನಲ್ಲಿ ನಡೆದ ವಾದ ಪ್ರತಿವಾದದ ಎಲ್ಲ ದಾಖಲೆ ನೀಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸದ್ಯಕ್ಕೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






