ರೈತರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ: ಗೋವಿಂದ ಕಾರಜೋಳ

ಅಕ್ಟೋಬರ್ 27, 2024 - 21:17
 0  15
ರೈತರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ: ಗೋವಿಂದ ಕಾರಜೋಳ

ಬೆಂಗಳೂರು: ರೈತರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. ವಿಜಯಪುರ ರೈತರಿಗೆ ವಕ್ಫ್‌ ಬೋರ್ಡ್‌ನಿಂದ ನೋಟಿಸ್‌ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್‌ ಹೆಸರಲ್ಲಿ ರೈತರ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ. ಹರಿಜನರಿಗೆ ನೋಟಿಸ್‌ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು.

ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ವಕ್ಫ್ ತಿದ್ದುಪಡಿ ಸಂಬಂಧ ಚರ್ಚೆ ನಡೆಸುತ್ತಿದೆ.ಅಷ್ಟರಲ್ಲಿ ಭೂಮಿ‌ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ನೋಟಿಸ್‌ ಕೊಡುವ ಅಗತ್ಯ ಇರಲಿಲ್ಲ. ಬಿಜೆಪಿಯಿಂದ ಸರ್ಕಾರಕ್ಕೆ, ವಕ್ಫ್ ಬೋರ್ಡ್ ಗೆ 15 ದಿನಗಳ ಗಡುವು ನೀಡುತ್ತಿದ್ದೇವೆ ಎಂದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow