ರೈತರಿಗೆ ಕೇಂದ್ರದಿಂದ ಭರ್ಜರಿ ಸಿಹಿ ಸುದ್ದಿ: ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ!

ನವದೆಹಲಿ:- ರೈತರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.
ರಾಜಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ರೈತರಿಗೆ ಎಂಎಸ್ಪಿ ಸಮಸ್ಯೆಯ ಕುರಿತು ಪೂರಕ ಪ್ರಶ್ನೆಗಳಿಗೆ ಉತ್ತರವಾಗಿ ಅವರು ಈ ಭರವಸೆ ನೀಡಿದರು. ಎಂಎಸ್ಪಿಗೆ ಕಾನೂನು ಬೆಂಬಲ ಸೇರಿದಂತೆ ಬೇಡಿಕೆಗಳ ಪಟ್ಟಿಯನ್ನು ಹೊತ್ತು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಆರಂಭಿಸಿದ ದಿನವೇ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ.
ಮೋದಿ ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿಸಲಿದೆ ಎಂದು ದೃಢಪಡಿಸಿದರು. ಎಂಎಸ್ಪಿಗೆ ಕಾನೂನು ಬೆಂಬಲಕ್ಕೆ ಒತ್ತಾಯಿಸಿ ದೆಹಲಿಗೆ ರೈತರ ಕಾಲ್ನಡಿಗೆಯ ನಂತರ ಈ ಭರವಸೆ ನೀಡಲಾಯಿತು.
ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿಯವರ ಭರವಸೆ ಎಂದಿದ್ದಾರೆ. ಇದೇ ವೇಳೆ ಪ್ರತಿಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವ ಚೌಹಾಣ್, ವಿಪಕ್ಷದವರು ಅಧಿಕಾರದಲ್ಲಿದ್ದಾಗ, ಅವರು ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಬರೆದಿದ್ದರು. ಎಂದಿದ್ದಾರೆ. ಈ ವೇಳೆ ಅವರು ಮಾಜಿ ಕೃಷಿ ಸಚಿವ ಕಾಂತಿಲಾಲ್ ಭೂರಿಯಾ, ಮಾಜಿ ಕೃಷಿ ಸಚಿವರಾದ ಶರದ್ ಪವಾರ್ ಮತ್ತು ಕೆ.ವಿ ಥಾಮಸ್ ಅವರ ಹೆಸರನ್ನು ಪ್ರಸ್ತಾಪಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






