ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ: ಸರ್ಕಾರಿ ಭೂಮಿ ಸಕ್ರಮಗೊಳಿಸಲು ನಿರ್ಧಾರ!

ಅಕ್ಟೋಬರ್ 6, 2024 - 08:07
 0  19
ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ: ಸರ್ಕಾರಿ ಭೂಮಿ ಸಕ್ರಮಗೊಳಿಸಲು ನಿರ್ಧಾರ!

ಬೆಂಗಳೂರು:- ರೈತರಿಗೆ ಸರ್ಕಾರ ಗುಡ್​ನ್ಯೂಸ್​ ನೀಡಿದ್ದು, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. 

ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಈ ಬಾರಿ ಬಗರ್​ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಕೆಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ವಿಚಾರವಾಗಿ ಮಾತನಾಡಿ ಅವರು, ಪರ ವಿರೋಧ ಚರ್ಚೆ ಆಗಲಿ. ಯಾರಿಗೆ ಆಗಲಿ ಅಭಿಪ್ರಾಯ ಹೇಳುವ ಅವಕಾಶ ಇದೆ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಹೇಳುತ್ತೇವೆ. ನಾನು ನನ್ನ ಅಭಿಪ್ರಾಯ ಸಭೆಯಲ್ಲಿ ಹೇಳುತ್ತೇನೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow