ವಂಚನೆ ಪ್ರಕರಣ: ಬಿಟಿವಿ ಎಂಡಿ ಜಿಎಂ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್.!
btv kannada kannada news supreme court

ವಂಚನೆ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ 'ಬಿಟಿವಿ'ಯ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಪ್ಪ ಮುನೀಂದ್ರ ಕುಮಾರ್ (ಜಿಎಂ ಕುಮಾರ್) ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿಕೊಂಡು ಎಡಗಿದ ಗಂಭೀರ ಆರ್ಥಿಕ ಅಪರಾಧ ಹಾಗೂ 10 ಕೋಟಿ ರೂ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಎಂ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿಕ್ಷಿಪ್ತ ಸನ್ನಿವೇಶಗಳು ಹಾಗೂ ಸಂದರ್ಭಗಳ ಕಾರಣದಿಂದ ಅರ್ಜಿದಾರರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕು ಎಂದು ದೂರುದಾರ- ನಿರ್ದೇಶಕ ಅಶ್ವಿನ್ ಮಹೇಂದ್ರ ಅವರ ಪರ ಹಾಜರಾದ ಹಿರಿಯ ವಕೀಲ ಆನಂದ್ ಸಂಜಯ್ ಎಂ ಅವರು ಮಂಡಿಸಿದ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.
ಕುಮಾರ್ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ನ್ಯಾ. ಸುಧಾಂಶು ಧುಲಿಯಾ ಮತ್ತು ನ್ಯಾ ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಎತ್ತಿಹಿಡಿದಿದೆ. ಬಂಧನದ ಹೊರತಾಗಿಯೂ ಕುಮಾರ್ ಅವರನ್ನು ಪೊಲೀಸರು ಇನ್ನೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ 2024ರ ಏಪ್ರಿಲ್ 19ರಂದು ಜಾಮೀನು ಅರ್ಜಿಯನ್ನು ರದ್ದುಗೊಳಿಸುವಾಗ ಕರ್ನಾಟಕ ಹೈಕೋರ್ಟ್, ಸಮಂಜಸವಾದ ಹಾಗೂ ಬಲವಾದ ಕಾರಣಗಳನ್ನು ನೀಡಿತ್ತು ಎಂದು ವಕೀಲರು ಆ ಅಂಶಗಳನ್ನು ಮಂಡಿಸಿದ್ದರು.
ದೂರುದಾರರ ಆರೋಪವೇನು?
ಅರ್ಜಿದಾರ ಬಿಎಂ ಕುಮಾರ್ ಅವರು ಇತರೆ ನಿರ್ದೇಶಕರಿಗೆ ಸೇರಿದ ಕಂಪೆನಿಯ ಪಾನ್ ಕಾರ್ಡ್ ಮತ್ತು ಕೆವೈಸಿ ವಿವರಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಮತ್ತು ಗಂಭೀರ ಆರ್ಥಿಕ ಅಪರಾಧಗಳನ್ನು ಎಸಗಿದ್ದಾರೆ. 10 ಕೋಟಿ ರೂ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ತಮಗೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಬರುವವರೆಗೂ ಎಂ/ಎಸ್ ಈಗಲ್ ಸೈಟ್ ಮೀಡಿಯಾ ಪ್ರೈ ಲಿ ಎಂಬ ಹೆಸರಿನಲ್ಲಿ ಖಾತೆಯನ್ನು ತೆರೆದಿರುವುದು ಹಾಗೂ ಅದರಲ್ಲಿ ವ್ಯವಹಾರ ನಡೆಸುತ್ತಿರುವುದೇ ತಮಗೆ ಗೊತ್ತಿರಲಿಲ್ಲ ಎಂದು ದೂರುದಾರರು ಹೇಳಿದ್ದಾರೆ.
ಜಾಮೀನು ಅರ್ಜಿಗೆ ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸಿದ ವಕೀಲ ವಿಎನ್ ರಘುಪತಿ ಕೂಡ ಆಕ್ಷೇಪ ವ್ಯಕ್ತಪಡಿಸಿದರು.
ಬ್ಯುರೊ ರಿಪೋರ್ಟ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






