ವರುಣನ ಅಬ್ಬರಕ್ಕೆ CCB ಕಚೇರಿಗೆ ನುಗ್ಗಿದ ನೀರು: ಬಸ್ ಡಿಪೋ ಜಲಾವೃತ - BMTC ಬಸ್ ಗಳು ಮುಳುಗಡೆ!

ಬೆಂಗಳೂರು: ಬೆಂಗಳೂರು ನಗರದಲ್ಲಿ ತಡರಾತ್ರಿ ಭಾರಿ ಮಳೆಯಾಗಿದ್ದು, ಸಾಕಷ್ಟು ಅವಾಂತರವಾಗಿದೆ. ಕಳೆದ ಒಂದು ದಶಕದಲ್ಲಿ ಮೇ ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಇದಾಗಿದೆ. ಮಳೆಯಿಂದಾಗಿ ಶಾಂತಿನಗರದಲ್ಲಿರುವ ಸಿಸಿಬಿ ಕಚೇರಿಗೂ ನೀರು ನುಗ್ಗಿದೆ. ಕಚೇರಿಯ ಕೆಳ ಮಹಡಿಯಲ್ಲಿ ಮಂಡಿ ಆಳದಷ್ಟು ನೀರು ನಿಂತಿದ್ದು,
ಬೆಳಗ್ಗೆಯವರೆಗೂ ನೀರಿನ ಮಟ್ಟ ಕಡಿಮೆಯಾಗಿಲ್ಲ. ನೀರು ನುಗ್ಗಿರುವುದರಿಂದ ಕೆಲ ಕಡತಗಳು ಹಾನಿಗೊಳಗಾಗಿವೆ ಎನ್ನಲಾಗುತ್ತಿದ್ದು, ತನಿಖಾ ಕಾರ್ಯಾಚರಣೆಗೆ ತೊಂದರೆಯಾಗಿದೆ. ಅಧಿಕಾರಿಗಳು ಹಾನಿಯ ಕುರಿತು ಮೌಲ್ಯಮಾಪನ ಮಾಡುತ್ತಿದ್ದಾರೆ.
ಬೊಮ್ಮನಹಳ್ಳಿ ಮತ್ತು ಸಿಲ್ಕ್ ಬೋರ್ಡ್ ರಸ್ತೆ ಜಲಾವೃತಗೊಂಡಿದ್ದು ಮುಖ್ಯ ರಸ್ತೆಯಲ್ಲಿ ಮೂರು ಅಡಿಗೂ ಹೆಚ್ಚು ನೀರು ನಿಂತಿದೆ. ಬೊಮ್ಮನಹಳ್ಳಿಯಿಂದ ಸಿಲ್ಕ್ ಬೋರ್ಡ್ ಕಡೆ ಹೋಗುವ ರಸ್ತೆಯಲ್ಲಿ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ.
ವರುಣಾರ್ಭಟಕ್ಕೆ ಶಾಂತಿನಗರ ಬಸ್ ಡಿಪೋದಲ್ಲಿ ಬಿಎಂಟಿಸಿ ಬಸ್ಗಳು ಭಾಗಶಃ ಮುಳುಗಿವೆ. ಶಾಂತಿ ನಗರ ಬಸ್ ಡಿಪೋ ಪೂರ್ತಿ ಜಲಾವೃತಗೊಂಡಿದೆ. ಇದರಿಂದಾಗಿ ಬೆಳಗ್ಗೆ ಡ್ಯೂಟಿಗೆ ಬಂದ ಬಿಎಂಟಿಸಿ ಸಿಬ್ಬಂದಿಗೆ ಶಾಕ್ ಎದುರಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






