ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌? ಸಿಎಂ ಕಚೇರಿ ಕೊಟ್ಟ ಸ್ಪಷ್ಟನೆ ಏನು

ಸೆಪ್ಟೆಂಬರ್ 5, 2024 - 16:56
 0  14
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌? ಸಿಎಂ ಕಚೇರಿ ಕೊಟ್ಟ ಸ್ಪಷ್ಟನೆ ಏನು
FOCUS KARNATAKA Siddharamaya

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌? ಸಿಎಂ ಕಚೇರಿ ಕೊಟ್ಟ ಸ್ಪಷ್ಟನೆ ಏನು

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ( ಇ.ಡಿ) ನೋಟಿಸ್ ನೀಡಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದಕ್ಕೆ ಸಿಎಂ ಕಚೇರಿ ಸ್ಪಷ್ಟೀಕರಣವನ್ನು ನೀಡಿದೆ. ಇಂತಹ ಮಾಹಿತಿಗಳು ಸುಳ್ಳು ಎಂದು ತಿಳಿಸಿದೆ.

ವಾಲ್ಮೀಕಿ ನಿಗಮದಲ್ಲಿ ಸುಮಾರು 92 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಇದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ಬಿ ನಾಗೇಂದ್ರ ಅವರ ಬಂಧನ ಆಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನ ಮಾಡಿದ್ದಾರೆ.

ಅಲ್ಲದೆ ನಿಗಮದ ಇತರ ಅಧಿಕಾರಿಗಳ ಬಂಧನವೂ ಆಗಿದೆ. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ನೋಟಿಸ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದರಲ್ಲಿ ಸತ್ಯಾಂಶ ಇಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆಯನ್ನು ನೀಡಿದೆ.

ವಾಲ್ಮೀಕಿ ನಿಗಮದ ಹಗರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ರಾಜಕೀಯವಾಗಿಯೂ ಆರೋಪ ಪ್ರತ್ಯಾರೋಪಕ್ಕೆ ಎಡೆ ಮಾಡಿಕೊಟ್ಟಿತ್ತು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಮಹತ್ವದ ಹಣಕಾಸು ವಂಚನೆ ಪ್ರಕರಣ ಇದಾಗಿದೆ.

ನಿಗಮದ ಅಧೀಕ್ಷಕ ಚಂದ್ರಶೇಖರನ್. ಪಿ (52) ಅವರ ಆತ್ಮಹತ್ಯೆಯ ನಂತರ ಹಗರಣವು ಬೆಳಕಿಗೆ ಬಂದಿತ್ತು. ಚಂದ್ರಶೇಖರನ್ ರವರು ಭ್ರಷ್ಟಾಚಾರದ ವಿವರಗಳನ್ನು ಮತ್ತು ಹಲವಾರು ಅಧಿಕಾರಿಗಳನ್ನು ಒಳಗೊಂಡಿರುವ ಸುಸೈಡ್ ನೋಟ್ ಬರೆದಿದ್ದರು.

ವಿಧಾನಸಭೆಯಲ್ಲೂ ವಾಲ್ಮೀಕಿ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆರೋಪಿಗಳ ಬಂಧನಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯ ಮಾಡಿದ್ದವು. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ನಿರಾಕರಣೆ ಮಾಡಿದ್ದರು.

ಅಲ್ಲದೆ, ಈ ಸಂಬಂಧಿಸಿದಂತೆ ಸದನಕ್ಕೆ ಸುದೀರ್ಘವಾದ ಉತ್ತರವನ್ನೂ ಅವರು ನೀಡಿದ್ದರು. ಬಂಧಿತ ಆರೋಪಿಗಳಿಂದ ಎಷ್ಟು ಹಣವನ್ನು ವಾಪಸ್ ಪಡೆಯಲಾಗಿದೆ ಎಂಬ ಬಗ್ಗೆಯೂ ಸದನಕ್ಕೆ ಮಾಹಿತಿಯನ್ನು ನೀಡಿದ್ದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow