ವಾಹನ ಸವಾರರಿಗೆ ಬಿಗ್ ಶಾಕ್: ಟೋಲ್ ಕಟ್ಟದೇ ಆಡುತ್ತಿದ್ದ ನಿಮ್ಮ ಕಳ್ಳಾಟ ಇನ್ನೂ ನಡೆಯಲ್ಲ!

ಫೆಬ್ರವರಿ 7, 2025 - 21:09
 0  13
ವಾಹನ ಸವಾರರಿಗೆ ಬಿಗ್ ಶಾಕ್: ಟೋಲ್ ಕಟ್ಟದೇ ಆಡುತ್ತಿದ್ದ ನಿಮ್ಮ ಕಳ್ಳಾಟ ಇನ್ನೂ ನಡೆಯಲ್ಲ!

ರಾಮನಗರ:- ಟೋಲ್ ತಪ್ಪಿಸಿ ಎಸ್ಕೇಪ್ ಆಗುತ್ತಿದ್ದ ವಾಹನ ಸವಾರರಿಗೆ NHAI ಶಾಕ್ ಕೊಟ್ಟಿದೆ. 

ಎಸ್, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್‌ನಿಂದ ಎಸ್ಕೇಪ್‌ ಆಗುವುದನ್ನ ತಪ್ಪಿಸಲು ಬಿಡದಿ ಬಳಿಯ ನಿರ್ಗಮನ ರಸ್ತೆ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್‌ ರಸ್ತೆಗೆ ಇಳಿದು ಟೋಲ್‌ ತಪ್ಪಿಸಿಕೊಳ್ಳುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. ಹೀಗಾಗಿ ಟೋಲ್‌ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಎಂಟ್ರಿಗೆ ಅವಕಾಶ ಕೊಟ್ಟು, ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow