ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಿಲ್ಲ, ಒಪ್ಪುವುದಿಲ್ಲ: ರಮೇಶ್ ಜಾರಕಿಹೊಳಿ

ನವೆಂಬರ್ 11, 2024 - 18:03
 0  12
ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಿಲ್ಲ, ಒಪ್ಪುವುದಿಲ್ಲ: ರಮೇಶ್ ಜಾರಕಿಹೊಳಿ

ರಾಯಚೂರು: ವಿಜಯೇಂದ್ರ‌ ನಾಯಕತ್ವದಲ್ಲಿ ನಾನು ವೇದಿಕೆ ಹತ್ತಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ,  ವಿಜಯೇಂದ್ರ ಇರುವವರೆಗೂ ನಾನು ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಿಲ್ಲ, ಒಪ್ಪುವುದಿಲ್ಲ. ಅವರ ಸ್ಥಾನಮಾನದ ಕೆಲಸಕ್ಕೆ ನಾನು ವಿರೋಧ ಮಾಡಿಲ್ಲ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವರಿಷ್ಠರು ತೀರ್ಮಾನಿಸುತ್ತಾರೆ. ಬಹಿರಂಗವಾಗಿ ನಾನು ಕೆಲವೊಂದು ವಿಷಯಗಳನ್ನ ಹೇಳಲ್ಲ. ಡಿಸೆಂಬರ್ ಅಥವಾ ಜನವರಿಯಲ್ಲಿ ಏನಾದ್ರೂ ನಿರ್ಣಯ ಆಗುತ್ತೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ವಿಜಯೇಂದ್ರ ರಾಜ್ಯಾಧ್ಯಕ್ಷ ಇರುವವರೆಗೂ ನಾನು ಎಲ್ಲಿ ಹೋಗಲ್ಲ ಅಂತಾ ನಿರ್ಣಯ ತಗೊಂಡೇನಿ. ಬಿಜೆಪಿ ಅಭಿಮಾನಿಗಳಿಗೆ ಫೋನ್ ಮೂಲಕ ಮತ ಹಾಕಲು ಹೇಳುತ್ತೇನೆ. ವಿಜಯೇಂದ್ರ‌ ನಾಯಕತ್ವದಲ್ಲಿ ನಾನು ವೇದಿಕೆ ಹತ್ತಲ್ಲ. ಈ ಬಗ್ಗೆ ಹೈಕಮಾಂಡ್ ಗೆ ಈಗಾಗಲೇ ಹೇಳಿದೀನಿ. ಹೈಕಮಾಂಡ್ ಪ್ರಚಾರಕ್ಕೆ ಹೋಗಿ ಅಂದ್ರೆ ಹೋಗ್ತಿನಿ‌. ಈವರೆಗೆ ನನಗೆ ಯಾರು ಹೋಗು ಎಂದು ಹೇಳಿಲ್ಲ. ನನ್ನ ಕರೆಯೋಕೆ ವಿಜಯೇಂದ್ರ‌ ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow