ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾ ಯುವ ಆಟಗಾರ: ಅಂತದ್ದೇನಾಯ್ತು!?

ಟೀಮ್ ಇಂಡಿಯಾದ ಆಟಗಾರರೋರ್ವರು ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ಜಾರೆ. ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಯುವ ಬ್ಯಾಟರ್ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತಮ ಫಾರ್ಮ್ನಲ್ಲಿದ್ದ ಸಾಯಿ ಸುದರ್ಶನ್ ಅವರನ್ನು ಪರ್ತ್ ಟೆಸ್ಟ್ನಿಂದ ಹೊರಗುಳಿದಿದ್ದ ಶುಭ್ಮನ್ ಗಿಲ್ ಅವರ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆ ಎಂದು ತಿಳಿದು ಬಂದಿದೆ.ಉತ್ತಮ ಫಾರ್ಮ್ನಲ್ಲಿದ್ದ ಸಾಯಿ ಸುದರ್ಶನ್ ಅವರನ್ನು ಪರ್ತ್ ಟೆಸ್ಟ್ನಿಂದ ಹೊರಗುಳಿದಿದ್ದ ಶುಭ್ಮನ್ ಗಿಲ್ ಅವರ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆ ಎಂದು ತಿಳಿದು ಬಂದಿದೆ.
ಹೀಗಾಗಿಯೇ ಆಸ್ಟ್ರೇಲಿಯಾದಿಂದ ಹಿಂತಿರುಗಿದ ಬಳಿಕ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಾಯಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ. ಎಲ್ಲಾ ರೀತಿಯ ಬೆಂಬಲಕ್ಕೆ ವೈದ್ಯಕೀಯ ತಂಡ ಹಾಗೂ ಬಿಸಿಸಿಐಗೆ ದೊಡ್ಡ ಧನ್ಯವಾದಗಳು. ಹಾಗೆಯೇ ಗುಜರಾತ್ ಟೈಟಾನ್ಸ್ ಫ್ಯಾಮಿಲಿಯ ಪ್ರೀತಿಗೆ ಮತ್ತು ಬೆಂಬಲಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






