ವಿಷ್ಣು ಸ್ಮಾರಕ ನೆಲಸಮ: "ಅಭಿಮಾನಿಗಳ ಹೃದಯವೇ ನಿಮಗೆ ಗುಡಿ" ಎಂದ ನಟಿ ರಮ್ಯಾ

ಆಗಸ್ಟ್ 18, 2025 - 20:04
ಆಗಸ್ಟ್ 18, 2025 - 17:25
 0  15
ವಿಷ್ಣು ಸ್ಮಾರಕ ನೆಲಸಮ: "ಅಭಿಮಾನಿಗಳ ಹೃದಯವೇ ನಿಮಗೆ ಗುಡಿ" ಎಂದ ನಟಿ ರಮ್ಯಾ
ವಿಷ್ಣು ಸ್ಮಾರಕ ನೆಲಸಮ: "ಅಭಿಮಾನಿಗಳ ಹೃದಯವೇ ನಿಮಗೆ ಗುಡಿ" ಎಂದ ನಟಿ ರಮ್ಯಾ

ಇತ್ತೀಚೆಗೆ ಚಂದನವನದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ/ಸಮಾಧಿಯನ್ನು ನೆಲಸಮ ಮಾಡಿರುವುದು ಅಭಿಮಾನಿಗಳು ಹಾಗೂ ಚಿತ್ರರಂಗದವರಿಗೆ ಬಹಳಾನೇ ನೋವುಂಟುಮಾಡಿದೆ. ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿರುವಾಗಲೇ ಬೆಂಗಳೂರು ಹೊರವಲಯದ ಅಭಿಮಾನ್‍ ಸ್ಟುಡಿಯೋದಲ್ಲಿದ್ದ ವಿಷ್ಣು ಪುಣ್ಯಭೂಮಿ ನೆಲಸಮಗೊಂಡ ಸುದ್ದಿ ಎಲ್ಲರನ್ನೂ ಆಘಾತಕ್ಕೀಡುಮಾಡಿತು. ಈ ಕುರಿತು ಸದ್ಯ ಸಾಕಷ್ಟು ಚರ್ಚೆಗಳಾಗುತ್ತಿವೆ. ಆರೋಪ ಮತ್ತು ಪ್ರತ್ಯಾರೋಪಗಳು ಶುರುವಾಗಿವೆ. 

ಇದೀಗ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.ಇನ್ಸ್‌ಸ್ಟಾಗ್ರಾಂನಲ್ಲಿ ನಟಿ ಹಾಕಿಕೊಂಡಿರುವ ಸ್ಟೋರಿಯಲ್ಲಿ, ನಟ ವಿಷ್ಣುವರ್ಧನ್ ಅವರ ಫೋಟೋ ಹಂಚಿಕೊಂಡು ಅದರಲ್ಲಿ ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಬರೆದುಕೊಂಡಿದ್ದಾರೆ.

ಧೀಮಂತ ನಾಯಕನ ವಿಚಾರದಲ್ಲಿ ಈ ವಿವಾದವನ್ನ ಅವರನ್ನ ಪ್ರೀತಿಸುವಂತಹ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಸಮಾಧಿ ಸ್ಥಳವನ್ನು ರಾತ್ರೋರಾತ್ರಿ ನಾಶಗೊಳಿಸಿ ಅಲ್ಲಿ ಯಾವುದೇ ಕುರುಹು ಇಲ್ಲದಂತೆ ವಿರೋಧಿಗಳು ಮಾಡಿದ್ದಾರೆ. ಹೀಗಾಗಿ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow