ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ!

ಕಲಬುರ್ಗಿ:- ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು ಬಟಾಬಯಲಾಗಿದ್ದು, ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ.
ಇದೇ ಫೆ.05ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಸ್ಕ್ಯಾನಿಂಗ್ಗೆ ಬಂದಾಗ ವೈದ್ಯರ ಯಡವಟ್ಟು ಬಯಲಾಗಿದೆ
ಬಳಿಕ ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಹೊಟ್ಟೆಯಲ್ಲಿದ್ದ ಬಟ್ಟೆ ಉಂಡೆ ಹಾಗು ಹತ್ತಿ ತೆಗೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






