ಶರಣಾದ ನಕ್ಸಲರು ಭೂಮಿಯೊಳಗೆ ಹೂತಿಟ್ಟಿದ್ದ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ..!

ಜನವರಿ 11, 2025 - 10:35
 0  11
ಶರಣಾದ ನಕ್ಸಲರು ಭೂಮಿಯೊಳಗೆ ಹೂತಿಟ್ಟಿದ್ದ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ..!

ಚಿಕ್ಕಮಗಳೂರುನಕ್ಸಲ್ ನಾಯಕ ವಿಕ್ರಂಗೌಡ ಎನ್ಕೌಂಟರ್ ಬಳಿಕ ಸಂವಿಧಾನದ ವಿರುದ್ಧ ಹಾದಿಯಲ್ಲಿ ತೆರೆಮರೆಯಲ್ಲಿ ಹೋರಾಟ ನಡೆಸುತ್ತಿದ್ದವರು ಮುಖ್ಯವಾಹಿನಿಗೆ ಬಂದರೆ ಸರ್ಕಾರ ಸಹಾನುಭೂತಿಯಿಂದ ನಡೆದುಕೊಳ್ಳಲಿದೆ ಎಂಬ ರಾಜ್ಯ ಸರ್ಕಾರದ ಭರವಸೆಯನ್ನ ನಂಬಿ ಆರು ಮಂದಿ ನಕ್ಸಲೀಯರು ಶರಣಾಗಿದ್ದಾರೆ.

ಇದೆಲ್ಲದರ ನಡುವೆ ಈಗ ನಕ್ಸಲರ ಗನ್ಗಳು ಪತ್ತೆಯಾಗಿವೆ. ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ಗಳು ಪತ್ತೆಯಾಗಿವೆ. ಎಕೆ 47, 303ಕೋವಿ, ಒಂದು ಪಿಸ್ತೂಲ್ಮತ್ತು 100ಕ್ಕೂ ಹೆಚ್ಚು ಗುಂಡುಗಳು ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿವೆ. ಗನ್ಗಳು ಯಾರದ್ದು ಎಂಬುದು ಸ್ಪಷ್ಟವಾಗಿಲ್ಲ

. ಗನ್ಗಳು ನಕ್ಸಲರದ್ದೇನಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಠಾಣಾ ವ್ಯಾಪ್ತಿಯಲ್ಲಿ ಗನ್ಗಳು ಪತ್ತೆಯಾಗಿವೆ. ಸದ್ಯ ಆಯುಧ ಆ್ಯಕ್ಟ್ ಅಡಿಯಲ್ಲಿ ಅಪರಿಚತರು ಎಂದು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ

ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆಯಾಗಿವೆ. ಜೊತೆಗೆ ಹನ್ನೊಂದು 7.62ಎಂಎಂ AK ammunitions, 303 ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳು ಪತ್ತೆಯಾಗಿವೆ. ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow