ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯ: 2ನೇ ತರಗತಿ ಬಾಲಕಿ ಮೇಲೆ ಅಪರಿಚಿತನಿಂದ ಅತ್ಯಾಚಾರ!

ರಾಯಚೂರು:- ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ 2ನೇ ತರಗತಿ ಬಾಲಕಿ ಮೇಲೆ ಅಪರಿಚಿತ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಶಾಲೆಯಿಂದ ಮನೆಗೆ ಕರೆದೊಯ್ಯುವ ನೆಪಮಾಡಿ ಆರೋಪಿ ಶಿವನಗೌಡ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಪೋಷಕರ ಅನುಮತಿಯಿಲ್ಲದೆ ಅಪರಿಚಿತರೊಂದಿಗೆ ಮಗುವನ್ನು ಕಳುಹಿಸಿದ ಶಾಲಾ ಸಿಬ್ಬಂದಿ ವಿರುದ್ಧ ಸಂತ್ರಸ್ತೆ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅತ್ಯಾಚಾರ ಎಸಗಿದಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಬೇರೆ ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದು ಪೋಷಕರು ಆಗ್ರಹಿಸಿದ್ದಾರೆ.
ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.
ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ
ನಿಮ್ಮ ಪ್ರತಿಕ್ರಿಯೆ ಏನು?






