ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ!

ತೆಲಂಗಾಣ: ಅನೇಕರು ತಂದೆಯನ್ನು ದೇವರಂತೆ ಕಾಣುತ್ತಾರೆ. ಆದ್ರೆ ಇಲ್ಲೊಬ್ಬ ತಂದೆ ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕೋಪದಿಂದ ಮಗನಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ. ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಅವನ ತಂದೆ ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು.
ವ್ಯಕ್ತಿ ತನ್ನ ಮಗನ ಎದೆಗೆ ಹೊಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆತ ಪ್ರಸ್ತುತ ಪರಾರಿಯಾಗಿದ್ದಾನೆ.
ನಿಮ್ಮ ಪ್ರತಿಕ್ರಿಯೆ ಏನು?






