ಶಾಸಕ ಮುನಿರತ್ನಗೆ ಬಿಗ್ ಶಾಕ್: ಶಾಸಕರ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್!

ಬೆಂಗಳೂರು:- ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇದ್ದಾರೆ ಎಂಬ ಆಡಿಯೋ ವೈರಲ್ ಆಗಿದೆ.
ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ವಾಹನ ನೀಡಲು 1 ಲಕ್ಷ ರೂ. ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಉಷಾ ಕೇಳಿದ್ದಾರೆ ಅಂತ ಫಲಾನುಭವಿಯೊಬ್ಬರು ಕಾಂಗ್ರೆಸ್ ಮುಖಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ.
3 ಲಕ್ಷ ರೂ. ಮೌಲ್ಯದ ವಾಹನ ನೀಡಲು 1 ಲಕ್ಷ ರೂ. ಲಂಚ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಲೇ 20 ಸಾವಿರ ರೂ. ಕೊಟ್ಟಿದ್ದೇನೆ. ವಾಹನ ಕೊಡಬೇಕೆಂದರೆ ಇನ್ನೂ 80 ಸಾವಿರ ಕೊಡಿ ಎಂದು ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದಾರೆ ಎಂದು ಫಲಾನುಭವಿ ಮತ್ತು ಕಾಂಗ್ರೆಸ್ ಮುಖಂಡ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






