ಶಿವಕುಮಾರ್ ಸಿಎಂ ಮತ್ತು ವಿಜಯೇಂದ್ರ ಡಿಸಿಎಂ ಅಂತ ಇಬ್ಬರ ನಡುವೆ ಡೀಲ್ ಆಗಿತ್ತು: ಯತ್ನಾಳ್ ಆರೋಪ

ದಾವಣಗೆರೆ: ಶಿವಕುಮಾರ್ ಸಿಎಂ ಮತ್ತು ವಿಜಯೇಂದ್ರ ಡಿಸಿಎಂ ಅಂತ ಇಬ್ಬರ ನಡುವೆ ಡೀಲ್ ಆಗಿತ್ತು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಒಂದು ಡೀಲ್ ನಡೆದಿತ್ತು, ಶಿವಕುಮಾರ್ ಮುಖ್ಯಮಂತ್ರಿ ಮತ್ತು ವಿಜಯೇಂದ್ರ ಉಪ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ಇನ್ನೂ ಬೇರೆ ಕೆಲ ರಾಜಕಾರಣಿಗಳ ಮಕ್ಕಳು ಡ್ರಗ್ಸ್ ತೆಗೆದುಕೊಂಡು ರಾತ್ರಿ ಎಲ್ಲೋ ಬಿದ್ದುಕೊಂಡಿರುತ್ತಾರೆ ಎಂದು ಹೇಳಿದ ಯತ್ನಾಳ್ ದಾವಣಗೆರೆ ಜಿಲ್ಲೆಯಲ್ಲೂ ಒಂದಿಬ್ಬರು ರಾಜಕಾರಣಿಗಳ ಮಕ್ಕಳು ಆ ಕೆಟೆಗಿರಿಗೆ ಸೇರುತ್ತಾರೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






