ಸಂವಿಧಾನ ಬದಲಾವಣೆ ವಿಚಾರ: ಹೇಳಬೇಕಾಗಿದ್ದನ್ನು ಡಿಕೆಶಿ ಅವರಿಗೆ ಸರಿಯಾಗಿ ಕನ್ವೇ ಮಾಡಲಾಗಿಲ್ಲ - ಯತೀಂದ್ರ

ಮೈಸೂರು: ಹೇಳಬೇಕಾಗಿದ್ದನ್ನು ಡಿಕೆಶಿ ಅವರಿಗೆ ಸರಿಯಾಗಿ ಕನ್ವೇ ಮಾಡಲಾಗಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸಂವಿಧಾನ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಯತೀಂದ್ರ ಅವರು, ಬಿಜೆಪಿಯವರಿಗೆ ಏನು ವಿಷಯ ಇಲ್ಲ.
ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಇಂಗ್ಲಿಷ್ ಅವರ ಮಾತೃ ಭಾಷೆ ಅಲ್ಲ. ಆದ್ದರಿಂದ ಅವರು ಹೇಳಬೇಕಾದ ವಿಚಾರ ಸರಿಯಾಗಿ ಹೇಳಲು ಆಗಿಲ್ಲ ಅಷ್ಟೆ. ಸಂವಿಧಾನ ರಕ್ಷಣೆ ಮಾಡಲು ಕಾಂಗ್ರೆಸ್ ಹೋರಾಟ ಮಾಡಿಕೊಂಡು ಬಂದಿದೆ. ನಾವು ಸಂವಿಧಾನ ಬದಲಾಯಿಸುವ ಪ್ರಯತ್ನ ಮಾಡಲ್ಲ.
ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿ ಅವರು ಹೇಳಿಕೆ ಕೊಟ್ಟ ಮೇಲೆ ಸ್ಪಷ್ಟನೆ ಕೊಟ್ಟಿಲ್ಲ. ಅನಂತ್ ಕುಮಾರ್ ಹೆಗಡೆ ಹೇಳಿಕೆ ಕೊಟ್ಟ ನಂತರ ಸ್ಪಷ್ಟನೆ ಕೊಡುವ ಕೆಲಸ ಮಾಡಿಲ್ಲ. ಆದರೆ ಡಿಕೆಶಿ ಸ್ಪಷ್ಟನೆಕೊಟ್ಟಿದ್ದಾರೆ. ಆದ್ರೆ ಬಿಜೆಪಿಯವರಿಗೆ ಕೆಲಸ ಇಲ್ಲದೆ ಈ ರೀತಿ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






