ಸಕ್ಕರೆನಾಡಲ್ಲಿ ಮತ್ತೊಂದು ನಾಲೆ ದುರಂತ: ವಿ.ಸಿ ನಾಲೆಗೆ ಕಾರು ಉರುಳಿಬಿದ್ದು ಮೂವರು ಸಾವು.!

ಫೆಬ್ರವರಿ 3, 2025 - 16:04
 0  21
ಸಕ್ಕರೆನಾಡಲ್ಲಿ ಮತ್ತೊಂದು ನಾಲೆ ದುರಂತ: ವಿ.ಸಿ ನಾಲೆಗೆ ಕಾರು ಉರುಳಿಬಿದ್ದು ಮೂವರು ಸಾವು.!

ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ತಡೆಗೋಡೆ ಇಲ್ಲದ ಕಾರಣ ಕಾರು ನಾಲೆಗೆ ಉರುಳಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ‌ ತಿಬ್ಬನಹಳ್ಳಿ ಗ್ರಾಮದ ಬಳಿ ಹರಿದು ಹೋಗುವ ವಿಸಿ ನಾಲೆಯಲ್ಲಿ ನಡೆದಿದೆ.

 ಮಂಡ್ಯ ನಗರದ ಹಾಲಹಳ್ಳಿ ಆಯಾಜ್, ಖಾಜು, ಫಯಾಜ್ ಅಲಿಯಾಸ್ ಬ್ಯಾಟರಿ ಮೃತರಾಗಿದ್ದು, ನಯಾಜ್ ಪ್ರಾಣಾಪಾಯದಿಂದ ಪರಾಗಿದ್ದು ಮಂಡ್ಯ ಮಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಪತ್ತೆಯಾದ ಇಬ್ಬರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿತ್ತು. ನಾಲೆಯಲ್ಲಿ ಹೆಚ್ಚಿನ ನೀರು ಹರಿಯುತ್ತಿರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಆಗುತ್ತಿದೆ. ಸದ್ಯ ಕಾರನ್ನು ಮೇಲಕ್ಕೆ ಎತ್ತಲು ಸ್ಥಳಿಯರು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow