ಸಚಿನ್ ಪಂಚಾಳ ಆತ್ಮಹತ್ಯೆ ಕೇಸ್: ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು - ಬಿವೈ ವಿಜಯೇಂದ್ರ

ಡಿಸೆಂಬರ್ 30, 2024 - 14:00
 0  14
ಸಚಿನ್ ಪಂಚಾಳ ಆತ್ಮಹತ್ಯೆ ಕೇಸ್: ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು - ಬಿವೈ ವಿಜಯೇಂದ್ರ

ಬೆಂಗಳೂರು: ಬೀದರ್​ನ ಯುವ ಗುತ್ತಿಗೆದಾರ ಸಚಿನ್​ ಪಂಚಾಳ ಆತ್ಮಹತ್ಯೆ ವಿವಾದ ದಿನದಿಂದ ದಿನದಕ್ಕೆ ತಾರಕಕ್ಕೇರಿತ್ತಿದೆ. ಸಚಿವ ಪ್ರಿಯಾಂಕ್​ ಖರ್ಗೆ ಆಪ್ತನ ಬೆದರಿಕೆಯಿಂದ ಡೆತ್​ನೋಟ್​ ಹರಿಬಿಟ್ಟು, ಸಚಿನ್​ ರೈಲಿಗೆ ತಲೆಕೊಟ್ಟಿದ್ದ.. ಗುತ್ತಿಗೆದಾರನ ಆತ್ಮಹತ್ಯೆ ಹಿಂದೆ ಸಚಿವರ ಹೆಸರು ಕೇಳಿ ಬರ್ತಿದ್ದಂತೆ, ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ಸಚಿವ ಪ್ರಿಯಾಂಕ್​ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದೆ. 

ಅದರಂತೆ ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು ಎಂದು ಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕ್ಲೀನ್ ಚಿಟ್ ಸಿಕ್ಕಿದ ಮೇಲೆ ಜಾರ್ಜ್​ ಮತ್ತೆ ಸಚಿವರಾದರು, ವಾಲ್ಮೀಕಿ ನಿಗಮದಲ್ಲಿ ನಾಗೇಂದ್ರ ರಾಜೀನಾಮೆ ನೀಡಿದರು, ಇದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು,

ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು, ಸಚಿನ್ ಕುಟುಂಬಕ್ಕೆ ಸರ್ಕಾರ ಭದ್ರತೆ ನೀಡಬೇಕು, ಹಾಗೂ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow