ಸತತ 45 ವರ್ಷದಿಂದ ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ 3 ದೀಪಗಳು ಆರಿ ಹೋದವು: ಕಾದಿದ್ಯಾ ಕೇಡು?

ಫೆಬ್ರವರಿ 7, 2025 - 20:00
 0  21
ಸತತ 45 ವರ್ಷದಿಂದ ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ 3 ದೀಪಗಳು ಆರಿ ಹೋದವು: ಕಾದಿದ್ಯಾ ಕೇಡು?

ಉತ್ತರ ಕನ್ನಡ:-ಎಣ್ಣೆ, ಬತ್ತಿ ಇಲ್ಲದೇ 45 ವರ್ಷದಿಂದ ಉರಿಯುತ್ತಿದ್ದ 3 ದೀಪಗಳು ಆರಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ದೀಪನಾಥೇಶ್ವರ ದೇವಾಲಯದದಲ್ಲಿ ಜರುಗಿದೆ. ಘಟನೆಯಿಂದ ಭಕ್ತರು ಆತಂಕಕ್ಕೊಂಡಿದ್ದಾರೆ

ಯಾವುದೇ ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಅಂದರೆ 4 ದಶಕದಿಂದಲೂ ನಿರತಂರವಾಗಿ ಉರಿಯುತ್ತಿದ್ದವು. ಆದರೆ ಏನಾಯಿತೋ ಏನೋ ಗೊತ್ತಿಲ್ಲ. ಇದೀಗ ಏಕಾಏಕಿ ಮೂರಕ್ಕೆ ಮೂರು ದೀಪಗಳು ಒಮ್ಮೆಗೆ ಆರಿ ಹೋಗಿವೆ. ಇದರಿಂದ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ದೀಪಗಳು ಇದ್ದಾಗ ನಿತ್ಯ ಜನರು, ಇವುಗಳನ್ನು ನೋಡಲೆಂದೇ ದೇವಾಲಯಕ್ಕೆ ಬರುತ್ತಿದ್ದರು. ಆದ್ರೆ, ಈಗ ಏಕಾಏಕಿ ದೀಪಗಳು ಆರಿ ಹೋಗಿದ್ದರಿಂದ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ದೀಪ ಆರಿದ್ರೆ ರಾಜ್ಯವನ್ನಾಳುವ ರಾಜನಿಗೆ ಕೆಡಕು ಎಂಬ ನಂಬಿಕೆ ಇದೆ. ಹೀಗಾಗಿ ಈಗ ದೀಪ ಆರಿದ್ದರಿಂದ ರಾಜನಿಗೆ ಏನೋ ಕೆಡಕು ಕಾದಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಚಿಗಳ್ಳಿ ಗ್ರಾಮದ ದೈವಜ್ಞ ಶಾರದಮ್ಮ ಎನ್ನುವರು 1979ರಲ್ಲಿ ಸೀಮೆ ಎಣ್ಣೆ ಹಾಕಿ ಒಂದು ಲಾಟೀನು ದೀಪವನ್ನು ಹಚ್ಚಿದ್ದರು. ಆದರೆ ಅದು ಒಂದು ದಿನ ಕಳೆದರೂ ಆರಿಲಿಲ್ಲ. ನಿರಂತರವಾಗಿ ಉರಿಯತೊಡಗಿತು. ಇದರಿಂದ ಕುತೂಹಲಗೊಂಡ ಶಾರದಮ್ಮ, ಒಂದು ವರ್ಷದವರೆಗೆ ಕಾಯ್ದು ಮತ್ತೊಂದು ದೀಪವನ್ನು 1980ರಲ್ಲಿ ಹಚ್ಚಿದರು. 2ನೇ ದೀಪ ಕೂಡ ಆರದೇ ನಿರಂತರವಾಗಿ ಉರಿಯ ತೊಡಗಿತು. 2ನೇ ದೀಪ ಹಚ್ಚಿದ 10-15 ದಿನಗಳ ನಂತರ ಮತ್ತೊಂದು 3ನೇ ದೀಪ ಬೆಳಗಿಸಿದರು. ಪವಾಡ ಎಂಬಂತೆ 3ನೇ ದೀಪ ಸೇರಿ ಮೂರು ದೀಪಗಳು ನಿರಂತರವಾಗಿ ಉರಿಯ ತೊಡಗಿದವು.

ಬಳಿಕ ಈ ದೀಪಗಳ ಉಸ್ತುವಾರಿಯನ್ನು ಅರ್ಚಕ ವೆಂಕಡೇಶ್ ಎಂಬುವವರು ನೋಡಿಕೊಳ್ಳುತ್ತಿದ್ದರು. ಆದ್ರೆ, ಅವರು 14 ದಿನದ ಹಿಂದೆ ಮೃತಪಟ್ಟಿದ್ದಾರೆ. ಈ ಸೂತಕದ ಹಿನ್ನಲೆಯಲ್ಲಿ ದೇವಸ್ಥಾನದ ಭಾಗಿಲು ಮುಚ್ಚಲಾಗಿತ್ತು. ಆದ್ರೆ, ಮೊನ್ನೇ ಬುಧವಾರ ದೇವಸ್ಥಾನದ ಬಾಗಿಲು ತೆರೆದಾಗ ಮೂರು ದೀಪಗಳು ಆರಿ ಹೋಗಿದ್ದವು. 1979ರಿಂದ 2025ರ ಫೆಬ್ರುವರಿವರೆಗೆ ನಿರಂತರವಾಗಿ ಉರಿದುಕೊಂಡು ಬಂದಿದ್ದ ದೀಪಗಳು ಆರಿ ಹೋಗಿರುವುದು ಕಂಡುಬಂದಿದೆ. ಇದರಿಂದ ಮತ್ತಷ್ಟು ಆತಂಕಗೊಂಡ ಗ್ರಾಮಸ್ಥರು, ಕೆಡುಕಾಗುವ ಭಯದಲ್ಲಿ ದೇವಸ್ಥಾನದ ಬಾಗಿಲು ಮುಚ್ಚಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow