ಸರ್ಕಾರದ ಮೇಲೆ ಅಪಪ್ರಚಾರ: ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ - ಕಾನೂನು ಸಚಿವರು ಹೇಳಿದ್ದೇನು?

ಬೆಂಗಳೂರು:- ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿದ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲು ಕಾಂಗ್ರೆಸ್ ರೆಡಿಯಾಗಿದೆ. ಈ ಸಂಬಂಧ ಹೆಚ್.ಕೆ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಮೇಲೆ ತಪ್ಪು ಮಾಹಿತಿ ಕೊಡುವುದು. ಅಪಪ್ರಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಸರ್ಕಾರ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದರು.
ಬಿಜೆಪಿ ಅವರು ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರೋ ಹಾಗೇ ಮಾಡ್ತಿದ್ದಾರೆ. ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಹೀಗಾಗಿ ಕೇಸ್ ಹಾಕಲಾಗಿದೆ. ಸರ್ಕಾರದ ವಿರುದ್ಧ ಮಾತಾಡಿದ್ರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ. ಅದಕ್ಕೆ ಕೇಸ್ ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






