ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು! ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

ಫೆಬ್ರವರಿ 5, 2025 - 12:01
 0  10
ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು! ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ. 

ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ. ರೇಷ್ಮಾ ಬಿ ಎಂಬ 25 ವರ್ಷದ ಬಾಣಂತಿ ಸಿಸೇರಿಯನ್ ನಂತರ ಆರೋಗ್ಯ ಸಮಸ್ಯೆಗಳಿಂದ ಬಳಲಿ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಸೂಕ್ತ ಚಿಕಿತ್ಸೆ ದೊರೆಯದಿರುವುದರಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಬಾಣಂತಿಯ ಕುಟುಂಬಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಷ್ಮಾ ಬಿ ಅವರು ಜನವರಿ 4 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ರೇಷ್ಮಾ ಅವರಿಗೆ ನಾರ್ಮಲ್ ಹೆರಿಗೆ ಆಗುತ್ತೆ ಅಂತ ವೈದ್ಯರು ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಿಸಿಕೊಂಡಿದ್ದಾರೆ. ಎರಡು ದಿನದ ಬಳಿಕ ಜನವರಿ 6 ರಂದು ನಾರ್ಮಲ್ ಹರಿಗೆ ಕಷ್ಟ, ಹೀಗಾಗಿ ಸಿಜರಿಯನ್ ಮೂಲಕ ಹೆರಿಗೆ ಮಾಡಬೇಕು ಅಂತ ಹೇಳಿ ಸಿಜರಿಯನ್ ಮಾಡಿದ್ದಾರೆ. ಗಂಡು ಮಗು ಜನಿಸಿದೆ. ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿದೆ ಅಂತ ವೈದ್ಯರು ಕುಟುಂಬಸ್ಥರಿಗೆ ಹೇಳಿದ್ದಾರೆ.

ಜನವರಿ 8 ರಂದು ತಾಯಿ ಮಗುವನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಅದರೆ, ಮನೆಗೆ ಹೋಗಿ ವಾರದ ಬಳಿಕ ರೇಷ್ಮಾಗೆ ಆಯಾಸ, ಉಸಿರಾಟದ ಸಮಸ್ಯೆ ಕಂಡು ಬಂದಿದೆ. ಹೀಗಾಗಿ, ಜನವರಿ 14 ರಂದು ಮತ್ತೆ ಬಿಮ್ಸ್ ಆಸ್ಪತ್ರೆಗೆ ಬಾಣಂತಿ ರೇಷ್ಮಾರನ್ನು ದಾಖಲು ಮಾಡಿದ್ದಾರೆ. ಸತತ 21 ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ರೇಷ್ಮ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ರೇಷ್ಮಾ ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow