ಸಾಲ ಭಾದೆ ತಾಳಲಾರದೇ ಪೆಟ್ರೋಲ್ ಸುರಿದುಕೊಂಡು ಸೂಸೈಡ್ ಮಾಡಿಕೊಂಡ ರೈತ!

ಚಿಂಚೋಳಿ:- ರೈತನೋರ್ವರು ಸಾಲದ ಭಾದೆ ತಾಳದೆ ಮತ್ತು ಹೊಲದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಿಂದ ಮನನೊಂದು ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪೋತಂಗಲ ಗ್ರಾಮದಲ್ಲಿ ಜರುಗಿದೆ.
45 ವರ್ಷದ ಪೊತಂಗಲ ಗ್ರಾಮದ ಪಾಂಡಪ್ಪ ತಿಪ್ಪಣ್ಣ ಮೃತಪಟ್ಟ ರೈತ. ಪ್ರಸ್ತುತ ಸಾಲಿನಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹೆಸರು, ಉದ್ದುಗಳನ್ನು ಪಾಂಡಪ್ಪ ತಿಪ್ಪಣ್ಣ ತನ್ನ ಹೊಲದಲ್ಲಿ ಬೆಳೆದಿದ್ದ. ಆದರೆ ಅತಿಯಾಗಿ ಸುರಿದ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದ್ದವು.ಅಲ್ಲದೇ ನಿಡಗುಂದಾ ಗ್ರಾಮ ಪಿಕೆಜಿಬಿ ಬ್ಯಾಂಕ್ ನಿಂದ 1 ಲಕ್ಷ ರೂ. ಬೆಳೆ ಸಾಲವನ್ನು ಪಡೆದುಕೊಂಡಿದ್ದನು. ಆದ್ದರಿಂದ ಆ ಬ್ಯಾಂಕ್ ನಿಂದ ರೈತನಿಗೆ ನೋಟಿಸ್ ಕೂಡಾ ನೀಡಲಾಗಿತ್ತು.
ಅಲ್ಲಿನ ಖಾಸಗಿ ಸಾಲದ ಹೊರೆ ಬಾಧೆ ತಾಳದೇ ಬೆಳಗಿನ ಜಾವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು. ಕೂಡಲೇ ಆತನನ್ನು ಸಮೀಪದ ನಿಡಗುಂದಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಸೇಡಮ ಆಸ್ಪತ್ರೆಯಲ್ಲಿ ಸೇರಿಸಲಾಯಿತು. ಇನ್ನುಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲೆಯ ಜೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






