ಸಾಲಗಾರರ ಕಿರುಕುಳ: ನಾಲ್ವರು ಮಕ್ಕಳ ಜೊತೆ ನಾಲೆಗೆ ಹಾರಿದ ದಂಪತಿ- ಆಮೇಲೇನಾಯ್ತು?
ಬೀದರ್:- ಭಾಲ್ಕಿ ತಾಲೂಕಿನ ಮರೂರು ಗ್ರಾಮದಲ್ಲಿ ಸಾಲಗಾರರ ಕಿರುಕುಳದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಕಾರಂಜಾ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
ಮೃತರನ್ನು ಶಿವಮೂರ್ತಿ ಮಾರುತಿ (45), 8 ತಿಂಗಳ ಪುಟ್ಟ ಕಂದ ರಾಕೇಶ್, ಶ್ರೀಕಾಂತ್ (8) ಹಾಗೂ ರಿತಿಕ್ (4) ಎಂದು ಗುರುತಿಸಲಾಗಿದೆ. ತಾಯಿ ರಮಾಬಾಯಿ ಮತ್ತು ಇನ್ನೋಬ್ಬ 7 ವರ್ಷದ ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಮಕ್ಕಳ ಸಮೇತ ದಂಪತಿ ಕಾಲುವೆಗೆ ಹಾರಿದ್ದಾರೆ. ಈ ವೇಳೆ ತಾಯಿ ಮತ್ತು ಇನ್ನೊಬ್ಬ ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೃತದೇಹವನ್ನು ಭಾಲ್ಕಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶಾಸಕ ಈಶ್ವರ್ ಖಂಡ್ರೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?