ಸಿಎಂ ಹಾಗೂ ಡಿಸಿಎಂ ಕೇರಳ ಪ್ರೇಮ ಮೆರೆಯುತ್ತಿರುವುದು ಇದೇ ಮೊದಲಲ್ಲ: ಸಿಟಿ ರವಿ ವ್ಯಂಗ್ಯ

ಡಿಸೆಂಬರ್ 11, 2024 - 14:13
 0  14
ಸಿಎಂ ಹಾಗೂ ಡಿಸಿಎಂ ಕೇರಳ ಪ್ರೇಮ ಮೆರೆಯುತ್ತಿರುವುದು ಇದೇ ಮೊದಲಲ್ಲ: ಸಿಟಿ ರವಿ ವ್ಯಂಗ್ಯ

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೇರಳ ಪ್ರೇಮ ಮೆರೆಯುತ್ತಿರುವುದು ಇದೇ ಮೊದಲಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಅದರಲ್ಲೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೇರಳ ಪ್ರೇಮ ಮೆರೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ಫೆಬ್ರವರಿಯಲ್ಲಿ ವಯನಾಡಿನ ಆನೆ ದಾಳಿ ಸಂತ್ರಸ್ತನ ಕುಟುಂಬದವರಿಗೆ ಕರ್ನಾಟಕ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ವಿಚಾರ ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಬಂಡೀಪುರ ಅರಣ್ಯ ಪ್ರದೇಶದಿಂದ ತೆರಳಿದ್ದ ಆನೆ ದಾಳಿ ನಡೆಸಿ ಸಾವನ್ನಪ್ಪಿರುವ ಕಾರಣ ಮೃತ ವ್ಯಕ್ತಿಗೆ ಪರಿಹಾರ ನೀಡಬೇಕು ಎಂಬ ಮನವಿ ಸಲ್ಲಿಕೆಯಾಗಿತ್ತು. ಅದರಂತೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪರಿಹಾರ ಘೋಷಣೆ ಕರ್ನಾಟಕದಲ್ಲಿ ವಿವಾದಕ್ಕೀಡಾಗುತ್ತಿದ್ದಂತೆಯೇ ಮೃತ ವ್ಯಕ್ತಿಯಕುಟುಂಬದವರು ಕರ್ನಾಟಕ ಸರ್ಕಾರದ ಪರಿಹಾರ ನಮಗೆ ಬೇಡ ಎಂದು ಹೇಳಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow