ಸಿಎಂ ಹುದ್ದೆ ಜಂಜಾಟ: ಸಿದ್ದರಾಮಯ್ಯ ಬಳಿಕ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಬಾಲಕೃಷ್ಣ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಒಂದಲ್ಲ ಒಂದು ಬದಲಾವಣೆಗಳು ನಡೆಯುತ್ತಲೇ ಇದೆ. ಇನ್ನು ಸರ್ಕಾರ ರಚನೆಯಾದ ಆರಂಭದಿಂದಲೂ ಸಿಎಂ ಕುರ್ಚಿ ಬಗ್ಗೆ ಮಾತುಕತೆ ನಡೆಯುತ್ತಲೇ ಇತ್ತು. ಈ ಹಿಂದೆ ಸಿಎಂ ಅಧಿಕಾರವಧಿಯನ್ನು ಯಾವುದೇ ಜಂಜಾಟವಿಲ್ಲದೆ ಪೂರ್ಣಗೊಳಿಸಿದ ಸಿದ್ದರಾಮಯ್ಯರಿಗೆ ಈ ಬಾರಿ ಹೆಜ್ಜೆ, ಹೆಜ್ಜೆಗೂ ಸವಾಲ್ ಗಳು ಎದುರಾಗುತ್ತಿದ್ದು ಎಲ್ಲವನ್ನು ನಿಭಾಯಿಸಿ ಐದು ವರ್ಷ ಪೂರ್ಣಗೊಳಿಸುತ್ತಾರಾ? ಅಧಿಕಾರ ಬಿಟ್ಟುಕೊಡುತ್ತಾರಾ? ಎಂಬುದೇ ಎಲ್ಲರ ಮುಂದಿರುವ ಪ್ರಶ್ನೆಯಾಗಿದೆ.
ಇದೀಗ ಸಿದ್ದರಾಮಯ್ಯ ಬಳಿಕ ಡಿಕೆಶಿ ಆವರು ಸಿಎಂ ಆಗ್ತಾರೆ ಎಂದು ಶಾಸಕ ಹಾಗೂ ಡಿಕೆ ಶಿವಕುಮಾರ್ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಗಡಿ ಬಾಲಕೃಷ್ಣ ಪರೋಕ್ಷ ಬ್ಯಾಟಿಂಗ್ ಮಾಡಿದ್ದಾರೆ. ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ನಾಯಕರ ಸಭೆಗೂ ಮುನ್ನ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಚರ್ಚೆ ವಿಚಾರವಾಗಿ ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ ಎಂದರು.
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಸಿಎಂ ಆಗಬೇಕಲ್ವಾ. ಬೇರೆ ಬೇರೆಯವರೂ ಇದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು. ಒಕ್ಕಲಿಗರ ಸಭೆಯಲ್ಲಿ ಡಿಕೆ ಶಿವಕುಮಾರ್ ಪರವಾಗಿ ಮಾತನಾಡಿರುವ ವಿಚಾರವಾಗಿ, ಅವರವರ ಜಾತಿ ಅಭಿಮಾನದ ಮೇಲೆ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡುತ್ತಾರೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






