ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ ಅಂತನೇ ಭಾವಿಸಿದ್ದೇವೆ: ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ ಅಂತನೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಲ್ಪಿ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ನಮಗೆ ಹೈಕಮಾಂಡ್ ನವ್ರು
ಎರಡೂವರೆ ವರ್ಷ ಅಧಿಕಾರ ಅಂತೇನೂ ಹೇಳಿರಲಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ ಅಂತನೇ ಭಾವಿಸಿದ್ದೇವೆ ಅಂತ ಇದೇವೇಳೆ ಪರಮೇಶ್ವರ್ ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ಕೊಟ್ಟಿರುವ ವಿಚಾರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ ಅಂದ ಪರಮೇಶ್ವರ್, ಹೈಕಮಾಂಡ್ ತೀರ್ಮಾನ ಏನೇ ಇದ್ರೂ ನಾವು ಒಪ್ಕೋತೇವೆ ಅಂದ್ರು. ಎಐಸಿಸಿ ಹೊಸ ಕಚೇರಿ ಉದ್ಘಾಟನೆ ವೇಳೆ ಅವ್ರು ಎಐಸಿಸಿ ಪುನಾರಚನೆ ಆಗಬೇಕು ಅಂದಿದ್ರು.
ಆ ಅರ್ಥದಲ್ಲಿ ಅವರು ಹೇಳಿರಬಹುದು. ಕೆಲ ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತೋ ಗೊತ್ತಿಲ್ಲ ಅಂತ ಪರಮೇಶ್ವರ್ ತಿಳಿಸಿದ್ರು.
ನಿಮ್ಮ ಪ್ರತಿಕ್ರಿಯೆ ಏನು?






