ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ: ಹೆಚ್.ವಿಶ್ವನಾಥ್

ಅಕ್ಟೋಬರ್ 23, 2024 - 21:02
 0  9
ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ: ಹೆಚ್.ವಿಶ್ವನಾಥ್

ಮೈಸೂರು: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಹೆಚ್​.ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಮೂರು ಪಾರ್ಟಿಗಳಲ್ಲಿ ಗುರುತಿಸಿಕೊಂಡಿದ್ದೇನೆ.

ಆದರೆ ನನ್ನ ತತ್ವ ಸಿದ್ಧಾಂತ ಬಿಟ್ಟಿಲ್ಲ, ಜಂಡಾ ಬಿಟ್ಟರೂ ಅಜೆಂಡಾ ಬಿಟ್ಟಿಲ್ಲ. ಇತ್ತೀಚೆಗೆ ಪಕ್ಷ ರಾಜಕಾರಣ ಬದಲು ವ್ಯಕ್ತಿ ರಾಜಕಾರಣ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಅನ್ನೋದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನಿನ್ನೆ ನಡೆದಿದ್ದು 500 ಕೋಟಿ ರೂ. ಶಿಲಾನ್ಯಾಸ ಕಾರ್ಯಕ್ರಮವೋ ಅಥವಾ ನಾನು ಸತ್ಯವಂತ ಅಂತಾ ಹೇಳಿಕೊಳ್ಳುವ ಕಾರ್ಯಕ್ರಮವೋ? ನೀವು ಎಷ್ಟೇ ಹೇಳಿದರೂ ಸಿದ್ದರಾಮಯ್ಯ ಭ್ರಷ್ಟ ಅಂತ ಜನ ನಿರ್ಧರಿಸಿದ್ದಾರೆ. ಮನೆ ಇಲ್ಲ ಮರಿಸ್ವಾಮಿ ಮನೇಲಿ ಮಲಿಗುತ್ತೇನೆ ಎನ್ನುತ್ತೇನೆ ಎಂದರೆ ಜನ ನಂಬಲ. ಸಿದ್ದರಾಮಯ್ಯ ಭ್ರಷ್ಟ ಅಂತಾ ಜನ ತೀರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow