ಸಿದ್ದರಾಮಯ್ಯ ಮುಂದೆ 6 ನಕ್ಸಲರು ಶರಣಾಗತಿ: ಬಂದೂಕು ಇಳಿಸಿ ಹೇಳಿದ್ದೇನು?

ಜನವರಿ 8, 2025 - 20:03
 0  11
ಸಿದ್ದರಾಮಯ್ಯ ಮುಂದೆ 6 ನಕ್ಸಲರು ಶರಣಾಗತಿ: ಬಂದೂಕು ಇಳಿಸಿ ಹೇಳಿದ್ದೇನು?

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೋಸ್ಟ್ ವಾಂಟೆಂಡ್ 6 ನಕ್ಸಲರನ್ನು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕರೆತರಲಾಗಿತ್ತು. ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತಿಯಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ರಸ್ತೆ ಮಾರ್ಗದ ಮೂಲಕ ಹಾಸನ, 

ಹಿರಿಸಾವೆಯಿಂದ ಬೆಂಗಳೂರಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡಿಗೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರನ್ನು ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆರು ನಕ್ಸಲರು ಆಗಮಿಸಿ ಶರಣಾಗತಿಯಾಗಿದ್ದಾರೆ.

ಇನ್ನು ತಮ್ಮ ಸಮ್ಮುಖದಲ್ಲೇ ಮುಖ್ಯವಾಹಿನಿ ಬಂದಿರುವ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಚರ್ಚಿಸಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಚರ್ಚಿಸಿ ಮುಖ್ಯವಾಹಿನಿಗೆ ಬರಲು ಇಂಗಿತ ವ್ಯಕ್ತಡಿಸಿದ್ದರು. ಈ ಮೂಲಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮುಂದೆ ಶರಣಾಗತಿಗೆ ಎಲ್ಲಾ ಮಾತುಕತೆ ಆಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಲು ತೀರ್ಮಾನಿಸಿದ್ದು, ಅದರಂತೆ ಇಂದು(ಜನವರಿ 08) ಬೆಳಗ್ಗೆ ಪೊಲೀಸ್ ಬಂದೋಬಸ್ತ್ನಲ್ಲಿ. ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ 6 ಗಂಟೆ ಹೊತ್ತಿಗೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow