ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು: ಬಿವೈ ವಿಜಯೇಂದ್ರ

ಜನವರಿ 17, 2025 - 13:58
 0  8
ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು: ಬಿವೈ ವಿಜಯೇಂದ್ರ

ಮೈಸೂರು: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಮೇಲೆ ಕಾಂಗ್ರೆಸ್ 40% ಆರೋಪ ಮಾಡಿತ್ತು. ಈಗ ಜನ ಹೇಳ್ತಿದ್ದಾರೆ ಇದು 60% ಸರ್ಕಾರ ಅಂತ… ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪೂರ್ಣಾವಧಿ ಸಿಎಂ ಆಗಲ್ಲ. ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು ಎಂದು ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೀದರ್ ನಲ್ಲಿ ಎಟಿಎಂ ಕಳ್ಳತನ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಳೆದ ಕೆಲ ದಿನಗಳಲ್ಲಿ ರಾಜ್ಯದಲ್ಲಿ ಅನೇಕ ಘಟನೆಗಳು ನಡೆಯುತ್ತಿವೆ. ಗುಲ್ಬರ್ಗಾದಲ್ಲಿ ಮಹಾಲಕ್ಷ್ಮಿ ಎಂಬ ಬಾಲಕಿ ಮೇಲೆ ಅತ್ಯಾಚಾರ ಆಗಿದೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ಯಲಾಗಿದೆ. ಮತ್ತೊಂದು ಕಡೆ ಬೀದರ್ ಘಟನೆ ಎಂದು ಸರ್ಕಾರದ ವಿರುದ್ಧ ಆರೋಪ ಮಾಡಿದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow