ಸಿದ್ದರಾಮಯ್ಯ ವಿರುದ್ಧ FIR ದಾಖಲು: ಮುಡಾ ದೂರುದಾರ ಸ್ನೇಹಮಹಿ ಕೃಷ್ಣ ಮೊದಲ ರಿಯಾಕ್ಷನ್!

ಸೆಪ್ಟೆಂಬರ್ 27, 2024 - 20:03
 0  8
ಸಿದ್ದರಾಮಯ್ಯ ವಿರುದ್ಧ FIR ದಾಖಲು: ಮುಡಾ ದೂರುದಾರ ಸ್ನೇಹಮಹಿ ಕೃಷ್ಣ ಮೊದಲ ರಿಯಾಕ್ಷನ್!

ಚಾಮರಾಜನಗರ:- ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR ದಾಖಲಾದ ವಿಚಾರಕ್ಕೆ  ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.  ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್​ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್​ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.

ಒಂದು ಮೊಬೈಲ್ ಫೋನ್​ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್​ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow