ಸಿದ್ದರಾಮಯ್ಯ ವಿರುದ್ಧ FIR ದಾಖಲು: ಮುಡಾ ದೂರುದಾರ ಸ್ನೇಹಮಹಿ ಕೃಷ್ಣ ಮೊದಲ ರಿಯಾಕ್ಷನ್!

ಚಾಮರಾಜನಗರ:- ಮುಡಾ ಕೇಸ್ನಲ್ಲಿ ಸಿಎಂ ವಿರುದ್ಧ FIR ದಾಖಲಾದ ವಿಚಾರಕ್ಕೆ ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.
ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್ಐಆರ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.
ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.
ಒಂದು ಮೊಬೈಲ್ ಫೋನ್ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






