ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಇಂದಿನಿಂದ ಹಗರಣದ ತನಿಖೆ ಶುರು!

ಸೆಪ್ಟೆಂಬರ್ 30, 2024 - 12:06
 0  8
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಇಂದಿನಿಂದ ಹಗರಣದ ತನಿಖೆ ಶುರು!

ಬೆಂಗಳೂರು:- ರಾಜ್ಯ ರಾಜಕೀಯ ಅಷ್ಟೇ ಅಲ್ಲದೆ ದೇಶದಲ್ಲೇ ಚರ್ಚೆಯಲ್ಲಿರುವ ಮುಡಾ ಹಗರಣ ಅಕ್ಷರಸಹ ಸಿದ್ದರಾಮಯ್ಯರನ್ನು ನಡುಗುವಂತೆ ಮಾಡಿದೆ. ಅಲ್ಲದೇ ಸಿಎಂ ಕುರ್ಚಿ ಅಲುಗಾಡುವಂತೆ ಮಾಡಿದೆ. ಇನ್ನೂ ವಿಚಾರ ವಿಪಕ್ಷಗಳಿಗೆ ಭರ್ಜರಿ ಭೋಜನ ಸಿಕ್ಕಂತಾಗಿದ್ದು, ಶತಾಯ ಗತಾಯ ಸರ್ಕಾರ ಉರುಳಿಸಲೇ ಬೇಕು ಎನ್ನುವ ರೀತಿ ಸ್ಕೆಚ್ ಹಾಕ್ತಿದ್ದಾರೆ. 


ಇದರ ಮಧ್ಯೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗುತ್ತಿದ್ದಂತೆಯೇ ಇಂದಿನಿಂದ ಅಸಲಿ ತನಿಖೆ ಶುರುವಾಗಲಿದೆ. ಇಂದಿನಿಂದ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಚುರುಕುಗೊಳ್ಳಲಿದ್ದು, ಲೋಕಾಯುಕ್ತ ಎಸ್​ಪಿ ಉದೇಶ್ ನೇತೃತ್ವದ 4 ತಂಡಗಳಿಂದ ತನಿಖೆ ನಡೆಯಲಿದೆ.

ಕಳೆದೆರಡು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಮುಡಾ​ಗೆ ಸಂಬಂಧಿಸಿದ 1998 ರಿಂದ 2023ರ ವರೆಗಿನ ಸಂಪೂರ್ಣ ಕಡತಗಳ ಪಡೆಯಲಿರುವ ಲೋಕಾಯುಕ್ತ ಪೊಲೀಸರು, ರೆವೆನ್ಯೂ ಎಕ್ಸ್​ಪರ್ಟ್​ಗಳ‌ ಮೂಲಕ ಮುಡಾ ಕಡತಗಳ ಪರಿಶೀಲನೆ ನಡೆಸಲಿದ್ದಾರೆ. ಜಮೀನಿನ ಮೂಲ ಮಾಲೀಕರಿಗೂ ನೋಟಿಸ್​​​ ನೀಡಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಎಲ್ಲಾ ಆರೋಪಿಗಳಿಗೆ ವಿಚಾರಣೆಗಾಗಿ ನೋಟಿಸ್​ ಜಾರಿ ಮಾಡಿ ತನಿಖೆ ಮಾಡಲಿದ್ದಾರೆ. ತನಿಖೆಯಲ್ಲಿ ಪತ್ತೆಯಾದ ಅಂತಿಮ ವರದಿಯನ್ನು ಕೋರ್ಟ್​ಗೆ ಸಲ್ಲಿಸಲಿದ್ದಾರೆ

ಮುಡಾ ಕೇಸ್​ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಆದರೆ, ದೂರು ಕೊಟ್ಟ ಕೊಡಲೇ ತನಿಖೆಯಾಗಲ್ಲ ಎಂದು ಸಿಎಂ ಹೇಳಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow