ಸಿದ್ದರಾಮಯ್ಯನವರೇ ಜೋಶಿ ಅವರು ಭಯೋತ್ಪಾದಕರಲ್ಲ, ದೇಶ ಭಕ್ತರು: ಮಹೇಶ್ ಟೆಂಗಿನಕಾಯಿ

ಅಕ್ಟೋಬರ್ 13, 2024 - 21:03
 0  12
ಸಿದ್ದರಾಮಯ್ಯನವರೇ ಜೋಶಿ ಅವರು ಭಯೋತ್ಪಾದಕರಲ್ಲ, ದೇಶ ಭಕ್ತರು: ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ಭಯೋತ್ಪಾದಕರು. ಜೋಶಿ ಅವರು ಭಯೋತ್ಪಾದಕರಲ್ಲ, ದೇಶ ಭಕ್ತರು ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಕೇಸ್ ಹಿಂಪಡೆದಿದ್ದೀರಿ. ಸಿದ್ದರಾಮಯ್ಯನವರೇ ಭಯೋತ್ಪಾದಕರು.

ಟಿಪ್ಪು ಜಯಂತಿ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ರಾಜ್ಯದಲ್ಲಿ ನೀವು ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾದರೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow