ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ದೊಡ್ಮನೆಯ ಮತ್ತೊಂದು ಕುಡಿ! ಯಾವುದು ಸಿನಿಮಾ?

ಸಿನಿಮಾ ರಂಗಕ್ಕೆ ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಎಂಟ್ರಿ ಕೊಟ್ಟಿದೆ. ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ಕುಮಾರ್ ಕುಟುಂಬದ ಮತ್ತೊಂದು ಕುಡಿ ಕನ್ನಡ ಚಿತ್ರರಂಗಕ್ಕೆ ಆಗಮಿಸಿದೆ.
ರಾಜಕುಮಾರ್ ಪುತ್ರಿ ಲಕ್ಷ್ಮೀ ಹಾಗೂ ಗೋವಿಂದರಾಜು ಪುತ್ರ ಷಣ್ಮುಖ ಗೋವಿಂದರಾಜ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಗೋವಿಂದರಾಜ್, ‘ನಿಂಬಿಯಾ ಬನಾದ ಮ್ಯಾಗ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.
ಚಿತ್ರದ ಕುರಿತು ಚಿಕ್ಕಮಗಳೂರು ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ಚಿತ್ರ ತಂಡ ಸಿನಿಮಾ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ. ಸಿನಿಮಾದ ಶೇಕಡ 70 ಭಾಗ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂದಿದೆ.
ಗೋವಿಂದರಾಜ್, ‘ನಿಂಬಿಯಾ ಬನಾದ ಮ್ಯಾಗ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು, ಏಪ್ರಿಲ್ 4 ರಂದು ಚಿತ್ರ ಬಿಡುಗಡೆಯಾಗಲಿದೆ
ನಿಮ್ಮ ಪ್ರತಿಕ್ರಿಯೆ ಏನು?






