ಸಿನಿಮಾ ಸ್ಟೈಲ್’ನಲ್ಲಿ ಬ್ಯಾಂಕ್ ದರೋಡೆ! ಕೆನರಾ ಬ್ಯಾಂಕ್’ಗೆ ಕನ್ನ ಹಾಕಿದ ಖದೀಮರು

ಮೇ 26, 2025 - 21:00
 0  8
ಸಿನಿಮಾ ಸ್ಟೈಲ್’ನಲ್ಲಿ ಬ್ಯಾಂಕ್ ದರೋಡೆ! ಕೆನರಾ ಬ್ಯಾಂಕ್’ಗೆ ಕನ್ನ ಹಾಕಿದ ಖದೀಮರು

ರಾಜ್ಯದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್ಗಳು ನಡೆಯುತ್ತಿವೆ. ಈ ಹಿಂದೆ ಬೀದರ್ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿತ್ತು.ಇದೀಗ ವಿಜಯಪುರ ಜಿಲ್ಲೆಯು ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ.

ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಬ್ಯಾಂಕ್ಗೆ ಬಂದಿಲ್ಲ.

ಇನ್ನು, ಬ್ಯಾಂಕ್ ಕಳ್ಳತನವಾದ ಸುದ್ದಿ ತಿಳಿದು, ಸಿಬ್ಬಂದಿ, ಮನಗೂಳಿ ಠಾಣೆ ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿದೆ. ಶ್ವಾನದಳ ಹಾಗೂ ಪೋಲಿಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow