ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ದುರ್ದೈವದ ಸಂಗತಿ: ಬಸವರಾಜ ಬೊಮ್ಮಾಯಿ

ಅಕ್ಟೋಬರ್ 23, 2024 - 21:54
 0  19
ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ದುರ್ದೈವದ ಸಂಗತಿ: ಬಸವರಾಜ ಬೊಮ್ಮಾಯಿ

ಹಾವೇರಿ: ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರೋದು ದುರ್ದೈವದ ಸಂಗತಿ ಎಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಮನವೊಲಿಸಲು ಬಹಳ ಪ್ರಯತ್ನ ಮಾಡಿದ್ದೇವೆ. ಆದರೆ ಆಗಲಿಲ್ಲ. ಅವರು ಕಾಂಗ್ರೆಸ್ ಸೇರಿರೋದು ದುರ್ದೈವದ ಸಂಗತಿ. ಕಾಂಗ್ರೆಸ್‌ಗೆ ಅಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಅಲ್ಲಿ ಸುಲಭವಾಗಿ ಗೆಲ್ಲಬಹುದಿತ್ತು. ಆದರೂ ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ ದೊಡ್ಡ ಪ್ರಭಾವ ಇದೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಅಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕುಮಾರಸ್ವಾಮಿ ಗೆದ್ದಿದ್ದರು. ಖಂಡಿತವಾಗಿ ಅಲ್ಲಿ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿ ಯಾರು ಅಂತ ನೀವು ಕುಮಾರಸ್ವಾಮಿಯವರನ್ನೇ ಕೇಳಬೇಕು. ಡಿಕೆ ಸುರೇಶ್ ಕಣಕ್ಕೆ ಇಳಿಸುವ ಬಗ್ಗೆ ಏನು ಗೊತ್ತಿಲ್ಲ. ಆದರೆ ಕಾಂಗ್ರೆಸ್‌ಗೆ ಅಲ್ಲಿ ಬೇಸ್ ಇಲ್ಲ ಅನ್ನೋದಂತೂ ಸ್ಪಷ್ಟ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow