ಸುಮಲತಾ ವಿರುದ್ಧ ಸಿಟ್ಟಾದ್ರಾ ನಟ ದರ್ಶನ್?: ಅನ್ಫಾಲೋ ಮಾಡಿದ್ದಕ್ಕೆ ದೊಡ್ಮಗನಿಗೆ ಟಾಂಗ್ ಕೊಟ್ರಾ ಮದರ್ ಇಂಡಿಯಾ!?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜಾಮೀನು ಪಡೆದಿದ್ದಾರೆ. ಈಗ ‘ಡೆವಿಲ್’ ಸಿನಿಮಾ ಶೂಟಿಂಗ್ ಶುರು ಮಾಡಲು ಮುಂದಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗುವ ಮುನ್ನ ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ತೊಡಗಿಕೊಂಡಿದ್ದರು. ಸುಮಾರು 9 ತಿಂಗಳ ಬಳಿಕ ಪುನಃ ಶೂಟಿಂಗ್ ಪ್ರಾರಂಭಿಸಲಿದ್ದಾರೆ.
ಇದರ ಬೆನ್ನಲ್ಲೇ ನಟ ದರ್ಶನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ.
ಇದೀಗ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅವರು ತಮ್ಮ ಇನ್ಸ್ಟಾದ ಸ್ಟೇಟಸ್ನಲ್ಲಿ 6 ಲೈನ್ಗಳನ್ನು ಇಂಗ್ಲಿಷ್ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ದರ್ಶನ್ ಅವರು ಅನ್ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅವರು ಸ್ಟೇಟಸ್ ಶೇರ್ ಮಾಡಿದ್ದರಿಂದ ಸದ್ಯ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಅವರು ಸುಮ್ಮನೇ ಈ ರೀತಿ ಹಾಕಿದರೋ ಅಥವಾ ಯಾರಿಗೋ ಏನೋ ಹೇಳಲು ಹೋಗಿ ಈ ರೀತಿ ಪೋಸ್ಟ್ ಮಾಡಿದರೋ ಗೊತ್ತಿಲ್ಲ. ಆದ್ರೆ ಸದ್ಯಕ್ಕಂತೂ ಈ ಪೋಸ್ಟ್ ಅಭಿಮಾನಿಗಳಲ್ಲಿ ಪ್ರಶ್ನೆಗಳನ್ನ ಮೂಡಿಸಿದೆ.
ಸುಮಲತಾ ಅವರು ಬರೆದ ಲೈನ್ಸ್ ಹೀಗಿವೆ.. ಸತ್ಯ ತಿರುಚುವ, ಪಶ್ಚಾತ್ತಾಪವಿಲ್ಲದೆ ಜನರನ್ನು ನೋಯಿಸುವರು. ಆರೋಪವನ್ನು ಬೇರೆಡೆಗೆ ಬದಲಾಯಿಸುವವರು. ಆದರೂ ಕೆಲವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುವಂತೆ ಮಾಡುವ ಅತ್ಯುತ್ತಮ ನಟನೆಗೆ ಆಸ್ಕರ್ ಪ್ರಶಸ್ತಿ ಕೊಡಬೇಕು ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






