ಸುಹಾಸ್ ಹತ್ಯೆ ಬೆನ್ನಲ್ಲೇ ಮೂವರಿಗೆ ಚಾಕು ಇರಿತ: ಮಂಗಳೂರಲ್ಲಿ ಪರಿಸ್ಥಿತಿ ಉದ್ವಿಗ್ನ!

ಮೇ 2, 2025 - 20:00
 0  22
ಸುಹಾಸ್ ಹತ್ಯೆ ಬೆನ್ನಲ್ಲೇ ಮೂವರಿಗೆ ಚಾಕು ಇರಿತ: ಮಂಗಳೂರಲ್ಲಿ ಪರಿಸ್ಥಿತಿ ಉದ್ವಿಗ್ನ!

ಮಂಗಳೂರು:- ಗುರುವಾರ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಮಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ನಗರದಲ್ಲಿ ಮೂವರಿಗೆ ಚಾಕು ಇರಿಯಲಾಗಿದೆ. 

ನಗರದ ಹೊರವಲಯದ ಕಣ್ಣೂರಿನಲ್ಲಿ ಮುಂಜಾನೆ 3 ಗಂಟೆಗೆ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಐವರು ದುಷ್ಕರ್ಮಿಗಳು, ನಗರದ ಮಾರುಕಟ್ಟೆ ಕೆಲಸಕ್ಕೆ ಹೋಗುತ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ದಾಳಿ ಮಾಡಿ ಚಾಕು ಇರಿದಿದ್ದಾರೆ. ಈ ವೇಳೆ, ಮನೆಯೊಂದಕ್ಕೆ ಓಡಿ ಹೋಗಿ ಇರ್ಶಾದ್ ಜೀವ ಉಳಿಸಿಕೊಂಡಿದ್ದಾನೆ. ಗಾಯಾಳುವಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಸಹ ಇಬ್ಬರಿಗೆ ಚಾಕು ಇರಿಯಲಾಗಿದೆ. ತಡರಾತ್ರಿ ಈ ದಾಳಿ ನಡೆದಿದ್ದು, ಮೂವರು ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ಬಜ್ಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ನಡೆದಿತ್ತು. ಸುರತ್ಕಲ್‍ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು 10 ಮಂದಿ ಸೇರಿ ತಲವಾರಿನಿಂದ ಹತ್ಯೆ ಮಾಡಿದ್ದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow