ಸೌಜನ್ಯ ಕೇಸ್ ವಿಡಿಯೋ ಮಾಡಿದ್ದ ಯುಟ್ಯೂಬರ್: ಸಾಮಾಜಿಕ ಜಾಲತಾಣ ವಿಭಾಗಕ್ಕೆ DGP ಯಿಂದ ಎಚ್ಚರಿಕೆ!

ಮಾರ್ಚ್ 6, 2025 - 11:59
 0  33
ಸೌಜನ್ಯ ಕೇಸ್ ವಿಡಿಯೋ ಮಾಡಿದ್ದ ಯುಟ್ಯೂಬರ್: ಸಾಮಾಜಿಕ ಜಾಲತಾಣ ವಿಭಾಗಕ್ಕೆ DGP ಯಿಂದ ಎಚ್ಚರಿಕೆ!

ಬೆಂಗಳೂರುಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಮೇಲೆ ನಡೆದ  ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡಿ ರಾಜ್ಯವನ್ನೇ ಸಂಚಲನ ಮೂಡಿಸಿತ್ತು. ಸೌಜನ್ಯ ಅವರ ಮೇಲೆ ಅತ್ಯಾಚಾರವೂ ನಡೆದಿತ್ತು. ಆದರೆ ಈ ಕೇಸ್‌ಗೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿದ್ದ ಸಂತೋಷ್ ರಾವ್ ಅವರು ನಿರಪರಾಧಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ.

ಇದೀಗ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಪುನಃ ಮುನ್ನೆಲೆಗೆ ಬಂದಿದೆ. ಯೂಟ್ಯೂಬರ್‌ ಸಮೀರ್‌ ಎಂಬಾತ ಮಾಡಿದ್ದ ವಿಡಿಯೋ ಭಾರೀ ವೈರಲ್‌ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಈ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್‌ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಮೀರ್‌ ಮಾಡಿರುವ ವಿಡಿಯೋ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ನಿರ್ಲಕ್ಷ್ಯ ವಹಿಸಿವೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ - ವಿರೋಧದ ಚರ್ಚೆ ಹುಟ್ಟಿಕೊಂಡಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಎಡಿಜಿಪಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಪೊಲೀಸ್‌ ಘಟಕಗಳ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ಚುರುಕಾಗಿ ಕೆಲಸ ಮಾಡಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ನಿಗಾ ವಹಿಸಬೇಕು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow